Webdunia - Bharat's app for daily news and videos

Install App

ಬೆಂಗಳೂರು- ಮೈಸೂರು ಹೆದ್ದಾರಿ ಬಂದ್: ಪ್ರಯಾಣಿಕರ ಪರದಾಟ

Webdunia
ಬುಧವಾರ, 7 ಸೆಪ್ಟಂಬರ್ 2016 (13:10 IST)
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ವಿರೋಧಿಸಿ ಪ್ರತಿಭಟನೆಯಲ್ಲಿ ತೊಡಗಿರುವ ರೈತರಿಂದಾಗಿ ಬೆಂಗಳೂರು- ಮೈಸೂರು ಹೆದ್ದಾರಿ ಬಂದ್ ಮಾಡಲಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ.
 
ಕೆಲ ಪ್ರತಿಭಟನಾಕಾರರು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಬಂದ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ರಾಜ್ಯ ಸರಕಾರ ಹಾರಂಗಿ ಜಲಾಶಯದಿಂದ ನಿನ್ನೆ ರಾತ್ರಿ 12 ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಹರಿಸಿರುವುದರಿಂದ ಆಕ್ರೋಶಗೊಂಡ ರೈತರ ಪ್ರತಿಭಟನೆ ಹಿಂಸೆಯತ್ತ ತಿರುಗಿದೆ.
 
ಇಂದು ಅಂಗಡಿ ಮುಗ್ಗಟ್ಟುಗಳ ಮೇಲೆ ದಾಳಿ ಮಾಡಿದ ಪ್ರತಿಭಟನಾಕಾರರು ಅಂಗಡಿಯಲ್ಲಿರುವ ವಸ್ತುಗಳನ್ನು ರಸ್ತೆಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕೂಡಲೇ ಮಧ್ಯಪ್ರವೇಶಿಸಿ ಲಘು ಲಾಠಿ ಪ್ರಹಾರ ಮಾಡಿ ಜನರನ್ನು ಚದುರಿಸುವಲ್ಲಿ ಯಶಸ್ವಿಯಾಗಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜು ಕಾಗೆ ರಾಜೀನಾಮೆ ಕೊಡ್ತಾರಂತೆ ಎಂದರೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು

ಇರಾನ್ ಗೆ ಕಾಡುತ್ತಿದೆಯಾ ಆ ಅಪ್ರಾಪ್ತ ಬಾಲಕಿಯ ಶಾಪ: 2004 ರಲ್ಲಿ ನಡೆದ ಶಾಕಿಂಗ್ ಘಟನೆಯಿದು

ಬಿಆರ್ ಪಾಟೀಲ್ ಬೆನ್ನಲ್ಲೇ ರಾಜು ಕಾಗೆಯಿಂದಲೂ ಸರ್ಕಾರದ ವಿರುದ್ಧವೇ ಬಾಂಬ್

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಬಹಳ ಜಾಣೆ, ಎರಡೇ ತಿಂಗಳಲ್ಲಿ ಕನ್ನಡ ಕಲಿತರಂತೆ

ಮುಂದಿನ ಸುದ್ದಿ
Show comments