Webdunia - Bharat's app for daily news and videos

Install App

ಕೇಜ್ರಿವಾಲ್‌ರನ್ನು ಜೈಲಿನಲ್ಲಿ ನಿಧಾನವಾಗಿ ಸಾವಿನೆಡೆಗೆ ತಳ್ಳಲಾಗುತ್ತಿದೆ: ಎಎಪಿ ಆರೋಪ

Sampriya
ಶನಿವಾರ, 20 ಏಪ್ರಿಲ್ 2024 (19:53 IST)
ನವದೆಹಲಿ: ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಇನ್ಸುಲಿನ್‌ ನೀಡಲು ಹಾಗೂ ವೈದ್ಯರನ್ನು  ಫೋನ್ ಮೂಲಕ ಭೇಟಿಗೆ ಅವಕಾಶ ನೀಡದೆ ಅವರನ್ನು ನಿಧಾನವಾಗಿ ಸಾವಿನೆಡೆಗೆ ತಳ್ಳಲಾಗುತ್ತಿದೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ  ಎಎಪಿ ವಕ್ತಾರ ಸೌರಭ್‌ ಭಾರದ್ವಾಜ್‌ ಅವರು,  ಕೇಜ್ರಿವಾಲ್‌ ಅವರು ಡಯಾಬಿಟಿಸ್‌ (ಮಧುಮೇಹ) ಹೊಂದಿದ್ದಾರೆ. ಆದ್ದರಿಂದ ಇನ್ಸುಲಿನ್‌ ಪಡೆಯಲು ಮತ್ತು ಅವರ ಕುಟುಂಬ ವೈದ್ಯರನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಂಪರ್ಕಿಸಲು ಅನುಮತಿ ಕೋರಿದ್ದಾರೆ. ಆದರೆ, ಅವರ ಮನವಿಯನ್ನು ಜೈಲಿನ ಅಧಿಕಾರಿಗಳು ನಿರಾಕರಿಸುತ್ತಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಿದಾಗಿನಿಂದ ಅವರ ಸಕ್ಕರೆ ಮಟ್ಟವನ್ನು (ಶುಗರ್‌ ಲೆವಲ್‌) ನಿಯಂತ್ರಿಸಲು ಇನ್ಸುಲಿನ್‌ ಅನ್ನು ನೀಡಲಾಗಿಲ್ಲ. ಇದು ಆತಂಕಕಾರಿಯಾಗಿದೆ ಎಂದು ಕೇಜ್ರಿವಾಲ್‌ ಪರ ವಕೀಲ ಅಭಿಷೇಕ್ ಸಿಂಘ್ವಿ ಹೇಳಿದ್ದಾರೆ.

ಮುಖ್ಯಮಂತ್ರಿ ಕೇಜ್ರಿವಾಲ್‌ ಅವರು ಕಳೆದ 2022 ವರ್ಷಗಳಿಂದ ಡಯಾಬಿಟಿಸ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರು ಇನ್ಸುಲಿನ್‌ ಪಡೆಯಲು ನಿರಾಕರಿಸುವ ಮೂಲಕ ಅವರ ಸಾವಿಗೆ ಪಿತೂರಿ ನಡೆಯುತ್ತಿದೆ  ಎಂದು ಭಾರದ್ವಾಜ್‌ ವಾಗ್ದಾಳಿ ನಡೆಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments