ಕೇಂದ್ರದ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

Webdunia
ಭಾನುವಾರ, 21 ಆಗಸ್ಟ್ 2022 (21:06 IST)
ಕೇಂದ್ರ ಸರ್ಕಾರವೇ ಸದಾ ರಾಜ್ಯಗಳ ವಿರುದ್ಧ ಸಂಘರ್ಷಕ್ಕೆ ಇಳಿದರೆ ದೇಶ ಅಭಿವೃದ್ಧಿಯಾಗುವುದು ಹೇಗೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಾರ್ಟಿ ನಾಯಕ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದರು. ಕೇಂದ್ರ ಸರ್ಕಾರವು ರಾಜ್ಯಗಳಿಗೆ ತೊಂದರೆ ಕೊಡುತ್ತಿದೆ ಎಂದು ನೇರ ಆರೋಪ ಮಾಡಿದ ಅವರು, ಹಣದುಬ್ಬರ, ನಿರುದ್ಯೋಗದ ಬಿಸಿಗೆ ಸಾಮಾನ್ಯ ಜನರು ತತ್ತರಿಸಿದ್ದಾರೆ. ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಜೊತೆಗೂಡಿ ಜನಹಿತಕ್ಕಾಗಿ ಶ್ರಮಿಸಬೇಕಿತ್ತು. ಆದರೆ ಇಲ್ಲಿ ಆಗುತ್ತಿರುವುದೇ ಬೇರೆ ಎಂದು ಅವರು ಟ್ವೀಟ್ ಮಾಡಿದ್ದಾರೆ..ದೆಹಲಿಯ ಉಪಮುಖ್ಯಮಂತ್ರಿ ಮತ್ತು ಆಪ್ ನಾಯಕ ಮನೀಶ್ ಸಿಸೊಡಿಯಾ ವಿರುದ್ಧ CBI ಲುಕ್​ಔಟ್ ನೊಟೀಸ್ ಜಾರಿ ಮಾಡಿದ ನಂತರ ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. CBI ಲುಕ್​ಔಟ್ ನೊಟೀಸ್ ಜಾರಿ ಮಾಡಿರುವುದರಿಂದ ಮನೀಶ್ ಸಿಸೋಡಿಯಾ ವಿದೇಶಕ್ಕೆ ಹೋಗುವುದಕ್ಕೆ ನಿರ್ಬಂಧ ಬಂದಿದೆ. ‘ಕೇಂದ್ರ ಸರ್ಕಾರದ ಸಚಿವರು ಮತ್ತು ಅಧಿಕಾರಿಗಳು ದೇಶ ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧ ಹೋರಾಡುತ್ತಿಲ್ಲ. ಬದಲಿಗೆ ದೇಶದ ವಿರುದ್ಧವೇ ಹೋರಾಡುತ್ತಿದ್ದಾರೆ. ಕೇಂದ್ರೀಯ ತನಿಖಾ ದಳ ಜಾರಿ ನಿರ್ದೇಶನಾಲಯವನ್ನು  ಈ ರೀತಿ ಹೆದರಿಸಲು ಬಳಸಿಕೊಂಡರೆ ದೇಶ ಉದ್ಧಾರವಾಗುವುದು ಹೇಗೆ’ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ರಾತ್ರಿ ಮನೆಗೆ ಹೋಗಲ್ಲ.. ವಿಧಾನಸೌಧದಲ್ಲೇ ಬಿಜೆಪಿ ಶಾಸಕರು ಮೊಕ್ಕಾಂ Video

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ ನಸೀರ್ ಅಹ್ಮದ್: ಹಾಗಿದ್ರೆ ರಾಹುಲ್ ಗಾಂಧಿ ಏನು ಎಂದು ಬಿಜೆಪಿ ತಿರುಗೇಟು

ಅಮೆರಿಕಾ ಒತ್ತಡಕ್ಕೆ ಮಣಿದು ಮೋದಿ ದೇಶವನ್ನೇ ಮಾರಿದ್ದಾರೆ: ರಾಹುಲ್ ಗಾಂಧಿ

ಮಣಿಪುರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ, ಮುಖ್ಯಮಂತ್ರಿಯಾಗಿ ಯುಮ್ನಮ್‌ ಖೇಮ್ಚಂದ್‌

ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments