Webdunia - Bharat's app for daily news and videos

Install App

ಬೆಂಗಳೂರಿಗೆ ಬರಲಿದ್ದಾರೆ ಕೇಜ್ರೀವಾಲ್!

Webdunia
ಮಂಗಳವಾರ, 19 ಏಪ್ರಿಲ್ 2022 (09:44 IST)
ಬೆಂಗಳೂರು : ದೆಹಲಿಯಲ್ಲಿ ಕಳೆದ 7 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಅರವಿಂದ ಕೇಜ್ರೀವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಪಂಜಾಬ್ ಗೆಲುವಿನ ಬಳಿಕ ಮತ್ತಷ್ಟು ಬಲಶಾಲಿಯಾಗಿದೆ.
 
ಇದೀಗ ತನ್ನ ಪಕ್ಷವನ್ನು ಇತರ ರಾಜ್ಯಗಳಿಗೂ ವಿಸ್ತರಿಸಲು ನಿರ್ಧರಿಸಿರುವ ಆಪ್ ಗುಜರಾತ್ ಹಾಗೂ ಕರ್ನಾಟಕ ಗೆಲ್ಲುವ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಚುನಾವಣೆಗೆ ಒಂದು ವರ್ಷಕ್ಕೂ ಮೊದಲೇ ಸಿದ್ಧತೆ ಆರಂಭಿಸಿದೆ.

ಆಪ್ ಸಿದ್ಧತೆಗೆ ಮಾಜಿ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಸೇರ್ಪಡೆ ಮತ್ತಷ್ಟು ಬಲ ತುಂಬಿದೆ.

ಇನ್ನು ಆಮ್ ಆದ್ಮಿ ಪಾರ್ಟಿ ಇಂದು, ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಆಯೋಜಿಸಿದೆ. ಪಕ್ಷದ ಮುಖಂಡರಾದ ಭಾಸ್ಕರ್ ರಾವ್, ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಸೇರಿದಂತೆ ಹಲವು ನಾಯಕರು ಇದರಲ್ಲಿ ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಹೊಸ ಜನಪರ ರಾಜಕೀಯ ಶುರುಮಾಡಲು ಕರೆ ಕೊಟ್ಟ ಪಕ್ಷದ ಅಧ್ಯಕ್ಷ ಪೃಥ್ವಿ ರೆಡ್ಡಿ ಇದೇ 21 ರಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಕಳೆದ 7 ವರ್ಷಗಳಿಂದ ದೆಹಲಿಯಲ್ಲಿ ಉತ್ತಮ ಆಡಳಿತವನ್ನ ಅರವಿಂದ್ ಕೇಜ್ರಿವಾಲ್ ಕೊಟ್ಟಿದ್ದಾರೆ.

ಇಡೀ ದೇಶದ ಜನ ಪಂಜಾಬ್ ಹಾಗೂ ದೆಹಲಿಯತ್ತ ನೋಡುತ್ತಿದ್ದಾರೆ. ಇದೀಗ ನಮ್ಮ ರಾಜ್ಯ ಕೂಡ ಅದನ್ನೇ ನೋಡುತ್ತಿದ್ದೇವೆ ಎಂದಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ಆಮ್ ಆದ್ಮಿ ಮುಖಂಡ ಭಾಸ್ಕರ್ ರಾವ್ ನಾನು ಕಳೆದ ಐದಾರು ದಿನಗಳಿಂದ ರಾಜ್ಯಾದ್ಯಂತ ಪ್ರವಾಸ ಮಾಡಿದ್ದೇನೆ.

ಯಾವುದೇ ಹಗರಣದ ವಾಸನೇ ಬಾರದ ರೀತಿ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಸರ್ಕಾರ ನಡೆಸಿದ್ದಾರೆ. ಹೀಗಾಗಿ ಸಮಾವೇಶದಲ್ಲಿ ಎಲ್ಲರು ಭಾಗವಹಿಸಿ. ಈ ಸಂದರ್ಭದಲ್ಲಿ 82 ಸಾರ್ವಜನಿಕರು ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments