Webdunia - Bharat's app for daily news and videos

Install App

ಕೇಂದ್ರ ಸಂಪುಟದಲ್ಲಿ ರಾಜ್ಯಕ್ಕೆ ಒಂದೇ ಸ್ಥಾನ?

Webdunia
ಬುಧವಾರ, 7 ಜುಲೈ 2021 (13:47 IST)
ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಪುನರಚನೆ ಇಂದು ಸಂಜೆ ನಡೆಯಲಿದ್ದು, ರಾಜ್ಯಕ್ಕೆ ಒಂದು ಸ್ಥಾನ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಬುಧವಾರ ಸಂಜೆ 6 ಗಂಟೆಗೆ ಸಂಪುಟ ಪುನರಚನೆ ನಡೆಯಲಿದ್ದು, ರಾಜ್ಯಕ್ಕೆ ಮೂರು ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಬಂದ ಮಾಹಿತಿ ಪ್ರಕಾರ ರಾಜ್ಯಕ್ಕೆ ಕೇವಲ ಒಂದು ಸ್ಥಾನ ಸೀಮಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಚಿತ್ರದುರ್ಗದ ಸಂಸದ ಎ.ನಾರಾಯಣಸ್ವಾಮಿ ಅವರಿಗೆ ಮಾತ್ರ ಸಚಿವ ಸ್ಥಾನ ನೀಡುವ ಸಾಧ್ಯತೆ ಇದ್ದು, ಉಳಿದ ಯಾರಿಗೂ ಸ್ಥಾನ ನೀಡಲಾಗುತ್ತಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.
ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ರಾಜ್ಯದ 8ರಿಂದ 10 ರಾಜ್ಯದ ಸಂಸದರಿಗೆ ಭಾರೀ ನಿರಾಸೆ ಉಂಟಾಗಿದೆ. ಲಿಂಗಾಯತರ ಕೋಟಾದಲ್ಲಿ ಸಚಿವ ಸ್ಥಾನ ನಿರೀಕ್ಷಿಸಿದ್ದ ಬಿ.ವೈ. ರಾಘವೇಂದ್ರ, ಶಿವಕುಮಾರ್ ಉದಾಸಿ, ಭಗವಂತ ಖೂಬಾಗಿಲ್ಲ ಅವರಿಗೆ ನಿರಾಸೆ ಆಗಲಿದೆ.
ರಾಜ್ಯದಿಂದ 25 ಮಂದಿ ಬಿಜೆಪಿ ಸಂಸದರಿದ್ದರೂ ಪ್ರಸ್ತುತ ಮೂವರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದ್ದು, ಸದಾನಂದಗೌಡ, ಪ್ರಹ್ಲಾದ್ ಜೋಷಿ ಈಗಾಗಲೇ ಸಚಿವ ಸ್ಥನ ಅಲಂಕರಿಸಿದ್ದಾರೆ. ಈಗ ನಾರಾಯಣಸ್ವಾಮಿಗೆ ಮಾತ್ರ ಅವಕಾಶ ದೊರೆಯಲಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments