ಕೆಂಗಲ್ ಹನುಮಂತಯ್ಯ ಒಬ್ಬ ದಕ್ಷ ಆಡಳಿಗಾರರಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

Sampriya
ಭಾನುವಾರ, 1 ಡಿಸೆಂಬರ್ 2024 (16:09 IST)
ಬೆಂಗಳೂರು: ಕೆಂಗಲ್ ಹನುಮಂತಯ್ಯ ಅವರು ಒಬ್ಬ ದಕ್ಷ ಆಡಳಿಗಾರರು. ಮುಖ್ಯಮಂತ್ರಿಯಾಗಿ, ಕೇಂದ್ರದ ಮಂತ್ರಿಯಾಗಿ ಆಡಳಿತವನ್ನು ಉತ್ತಮವಾಗಿ ನಡೆಸಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ ಪ್ರತಿಮೆಗೆ ಮಾಪಾರ್ಪಣೆ ಮಾಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.‌

ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿಯನ್ನು ಪ್ರತಿ ವರ್ಷ ಆಚರಿಸಲಾಗುತ್ತಿದೆ. ಸರ್ಕಾರದ ಪರವಾಗಿ ಪ್ರತಿ ವರ್ಷವೂ ಪುಷ್ಪ ನಮನ ಸಲ್ಲಿಸುವ ಮೂಲಕ  ಗೌರವಿಸಿ ಅವರನ್ನು ಸ್ಮರಿಸಲಾಗುತ್ತಿದೆ ಎಂದರು.

 ವಿಧಾನಸೌಧವನ್ನು ಕಟ್ಟಿಸಿದಾಗ ಸರ್ಕಾರದ ಕೆಲಸ ದೇವರ ಕೆಲಸ ಎಂದು ಹೇಳಿದರು. ಏಕೀಕರಣ ಆಗಬೇಕು ಎಂದು ಬಲವಾಗಿ ನಂಬಿ ಕನ್ನಡ ಮಾತನಾಡುವವರು ಒಂದಾಗಿ ನಾಡಿನ ಸರ್ವತೋಮುಖ ಅಭಿವೃದ್ಧಿ ಆಗಬೇಕೆಂದು ಶ್ರಮಿಸಿ ಕಟಿಬದ್ಧರಾಗಿ ಕೆಲಸ ಮಾಡಿದರು ಎಂದರು.

ನೆಹರೂ ಅವರೊಂದಿಗೆ ಅನ್ಯೋನ್ಯ ಸಂಬಂಧ

ಕೆ.ಸಿ.ರೆಡ್ಡಿಯವರು ಮೊದಲನೇ ಮುಖ್ಯಮಂತ್ರಿಗಳಾಗಿದ್ದರೆ ಸ್ವಾತಂತ್ಯ್ರ ಬಂದ ನಂತರ ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದವರು. ನೆಹರೂ ಅವರು  ಪ್ರಧಾನಮಂತ್ರಿಗಳಾಗಿದ್ದಾಗ ಇವರು ಮುಖ್ಯಮಂತ್ರಿಗಳಾಗಿದ್ದರು
 ನೆಹರೂ ಅವರೊಂದಿಗೆ ಅನ್ಯೋನ್ಯ ಸಂಬಂಧವಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

ಅವರ ಆಡಳಿತ ಜನಪರ, ದಕ್ಷವಾಗಿತ್ತು. ಅದನ್ನು ನಾವು ಸ್ಮರಿಸಿ ಅವರು ಹಾಕಿದ ದಾರಿಯಲ್ಲಿ ನಡೆಯುವ ಪ್ರಯತ್ನವನ್ನು ಮಾಡುತ್ತೇವೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದರು.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments