Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

Krishnaveni K
ಶುಕ್ರವಾರ, 30 ಮೇ 2025 (11:21 IST)
ಕಾಸರಗೋಡು: ಕೇರಳ ಗಡಿ ಜಿಲ್ಲೆ ಕಾಸರಗೋಡಿನಲ್ಲಿ ವಿಪರೀತ ಮಳೆಯಾಗುತ್ತಿದ್ದು, ಪ್ರಸಿದ್ಧ ಮಧೂರು ದೇವಾಲಯದ ಪ್ರಾಂಗಣದೊಳಗೇ ನೀರು ನುಗ್ಗಿದೆ.

ಕೇರಳದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಅದರಲ್ಲೂ ಕಾಸರಗೋಡು ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿದೆ. ಇಂದೂ ಕೂಡಾ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ.

ಈ ನಡುವೆ ಜಿಲ್ಲೆಯ ಪ್ರಸಿದ್ಧ ಗಣಪತಿ ದೇವರ ಸನ್ನಿಧಿಯಾಗಿರುವ ಮಧೂರು ದೇವಾಲಯದಲ್ಲಿ ಮಧುವಾಹಿನಿ ಹೊಳೆ ನೀರು ನುಗ್ಗಿದ್ದು ಪ್ರಾಂಗಣವಿಡೀ ನೀರಿನಲ್ಲಿ ಮುಳುಗಿದೆ. ನಿಂತರೆ ಸೊಂಟದವರೆಗೂ ನೀರು ನಿಲ್ಲುವಷ್ಟು ನೀರು ತುಂಬಿದೆ.

ಇದರಿಂದಾಗಿ ಭಕ್ತರು ನೀರಿನಲ್ಲಿಯೇ ದೇವರಿಗೆ ಪ್ರಾರ್ಥನೆ ಮಾಡುವ ಸ್ಥಿತಿ ಎದುರಾಗಿದೆ. ಪ್ರತೀ ಬಾರಿಯೂ ಇಲ್ಲಿ ಮಳೆಗಾಲದಲ್ಲಿ ನೀರು ದೇವಾಲಯಕ್ಕೆ ನುಗ್ಗುವುದು ಸಾಮಾನ್ಯವಾಗಿದೆ. ಈ ಬಾರಿಯೂ ದೇವಾಲಯದ ಸಮೀಪದಲ್ಲೇ ಇರುವ ಹೊಳೆ ಭಾರೀ ಮಳೆಯಿಂದ ಉಕ್ಕಿ ಹರಿಯುತ್ತಿರುವ ಕಾರಣ ಎಲ್ಲಿ ನೋಡಿದರೂ ನೀರು ಎಂಬ ಪರಿಸ್ಥಿತಿಯಾಗಿದೆ.

ಇನ್ನು ಕೇರಳದಲ್ಲಿ ಇನ್ನೂ ಎರಡು ದಿನಗಳಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಿಂದ ಕೆಲವೆಡೆ ರಸ್ತೆ ಕುಸಿದ ಘಟನೆಗಳೂ ನಡೆದಿವೆ. ಸದ್ಯಕ್ಕೆ ಕೇರಳದ ಕಡಲತೀರಗಳಿಗೆ, ಪ್ರವಾಸೀ ತಾಣಗಳಿಗೆ ತೆರಳದಿರುವುದು ಸುರಕ್ಷತೆಯ ದೃಷ್ಟಿಯಿಂದ ಉತ್ತಮವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments