Webdunia - Bharat's app for daily news and videos

Install App

Kerala Viral video: ಟಾರ್ಗೆಟ್ ತಲುಪದ ನೌಕರರನ್ನು ನಾಯಿಗಳಂತೆ ನಡೆಸಿಕೊಂಡ ಖಾಸಗಿ ಕಂಪನಿ ವಿಡಿಯೋ ವೈರಲ್

Krishnaveni K
ಸೋಮವಾರ, 7 ಏಪ್ರಿಲ್ 2025 (09:50 IST)
Photo Credit: X
ತಿರುವನಂತಪುರಂ: ಟಾರ್ಗೆಟ್ ತಲುಪದ ನೌಕರರನ್ನು ಕೇರಳದ ಖಾಸಗಿ ಕಂಪನಿಯೊಂದು ನಾಯಿಗಳಂತೆ ಕುತ್ತಿಗೆಗೆ ಪಟ್ಟಿ ಕಟ್ಟಿ ಹೀನಾಯವಾಗಿ ನಡೆಸಿಕೊಂಡ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕೊಚ್ಚಿಯಲ್ಲಿರುವ ಖಾಸಗಿ ಕಂಪನಿಯೊಂದು ಟಾರ್ಗೆಟ್ ತಲುಪದ ನೌಕರರನ್ನು ಈ ರೀತಿ ನಡೆಸಿಕೊಂಡಿದೆ. ನೌಕರರನ್ನು ಮಂಡಿಗಾಲಲ್ಲಿ ನಡೆಸುವುದು, ಪ್ಯಾಂಟ್ ಬಿಚ್ಚಿಸಿ ಅರೆನಗ್ನರಾಗಿಸುವುದು, ನೆಲವನ್ನು ನಾಯಿಯಂತೆ ನೆಕ್ಕಿಸುವುದು ಇತ್ಯಾದಿ ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ.

ವಿಡಿಯೋದಲ್ಲಿ ಒಂದಿಬ್ಬರನ್ನು ಈ ರೀತಿ  ನಡೆಸಿಕೊಳ್ಳುತ್ತಿದ್ದರೆ ಉಳಿದವರು ನಿಂತು ಸಿನಿಮಾ ರೀತಿ ತಮಾಷೆ ನೋಡುತ್ತಿರುವುದು ಕಂಡುಬಂದಿದೆ. ಇವರೆಲ್ಲಾ ಕೇವಲ 6,000 ರಿಂದ 8000 ರೂ.ಗಳ ಕನಿಷ್ಠ ವೇತನಕ್ಕೆ ಕೆಲಸ ಮಾಡುವವರು ಎನ್ನಲಾಗಿದೆ.

ಮಾರಾಟ ಗುರಿ ತಲುಪದೇ ಇದ್ದರೆ ಈ ನೌಕರರನ್ನು ನಾಯಿಗಳಂತೆ ನಡೆಸಿಕೊಳ್ಳಲಾಗುತ್ತದೆ. ಇದರ ಬಗ್ಗೆ ಕೇರಳ ಸರ್ಕಾರ ಎಚ್ಚೆತ್ತುಕೊಂಡು ಕಂಪನಿ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೇ ಕೇರಳ ಕಾರ್ಮಿಕ ಇಲಾಖೆ ಎಚ್ಚೆತ್ತುಕೊಂಡಿದ್ದು ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದೆ. ವಿಚಿತ್ರವೆಂದರೆ ವಿಡಿಯೋದಲ್ಲಿರುವ ವ್ಯಕ್ತಿಯೇ ಇದು ಹಳೆಯ ವಿಡಿಯೋ, ನನಗೆ ಕಂಪನಿಯಲ್ಲಿ ಯಾವುದೇ ಚಿತ್ರಹಿಂಸೆ ನೀಡಲಾಗಿಲ್ಲ ಎಂದಿದ್ದಾನೆ. ಹೀಗಾಗಿ ಪ್ರಕರಣದ ಬಗ್ಗೆ ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments