ಮಸೀದಿಗೆ ನೀಡಿದ್ದ ಹಣ ವಾಪಾಸ್​​ ಕೇಳಿದ ಕೆಜಿಎಫ್​ ಬಾಬು

Webdunia
ಗುರುವಾರ, 18 ಮೇ 2023 (14:00 IST)
ಕೋಟಿ ಕುಬೇರ ಕೆಜಿಎಫ್‌ ಬಾಬು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಇದರ ಬೆನ್ನಲ್ಲೇ ಮಸೀದಿಗಳಿಗೆ ನೀಡಿದ್ದ ಹಣದ ಚೆಕ್‌ಗಳನ್ನು ವಾಪಸ್‌ ಪಡೆಯಲು ಕೆಜಿಎಫ್‌ ಬಾಬು ಮುಂದಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿದವರ ಪೈಕಿ ಅತಿ ಶ್ರೀಮಂತ ಅಭ್ಯರ್ಥಿಯಾಗಿದ್ದ ಕೆಜಿಎಫ್‌ ಬಾಬು ಉರ್ದು ಪತ್ರಿಕೆಯೊಂದರಲ್ಲಿ ಜಾಹೀರಾತು ನೀಡುವ ಮೂಲಕ ಚೆಕ್‌ಗಳನ್ನು ವಾಪಸ್‌ ಕೇಳಿದ್ದಾರೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯುಸೂಫ್‌ ಷರೀಫ್‌ ಅಲಿಯಾಸ್‌ ಕೆಜಿಎಫ್‌ ಬಾಬು ಸುಮಾರು 64 ಮಸೀದಿಗಳಿಗೆ 17.30 ಕೋಟಿ ರೂ. ಮೌಲ್ಯದ ಚೆಕ್‌ಗಳನ್ನು ನೀಡಿದ್ದರು. ಈಗ ಉರ್ದು ಪತ್ರಿಕೆಯಲ್ಲಿ ಜಾಹೀರಾತು ನೀಡಿರುವ ಕೆಜಿಎಫ್‌ ಬಾಬು ನಾನು ನೀಡಿರುವ ಹಣವನ್ನು ಮಸೀದಿಗಳು ಬಳಸಬಾರದು. ಅದು ಸ್ವೀಕರಾರ್ಹವಲ್ಲದ ಹಣ, ಆದಷ್ಟು ಬೇಗ ಚೆಕ್‌ಗಳನ್ನು ವಾಪಸ್‌ ಮಾಡಿ ಎಂದು ಸಮಿತಿಗಳಿಗೆ ಹೇಳಿದ್ದಾರೆ. ಇಸ್ಲಾಮಿಕ್ ಸಂಸ್ಥೆ ದಾರುಲ್ ಉಲೂಮ್‌ ಹೊರಡಿಸಿರುವ ಫತ್ವಾ ಉಲ್ಲೇಖಿಸಿರುವ ಕೆಜಿಎಫ್‌ ಬಾಬು, ಚುನಾವಣಾ ಸಮಯದಲ್ಲಿ ರಾಜಕಾರಣಿಗಳಿಂದ ಪಡೆದ ಹಣ ಸ್ವೀಕರಾರ್ಹವಲ್ಲ ಎಂದಿದ್ದಾರೆ. ಸಿದ್ದಾಪುರದ ಟ್ಯಾಂಕ್ ಗಾರ್ಡನ್‌ನಲ್ಲಿರುವ ಮಸೀದಿ-ಇ-ಅತಿಕ್ ಹಾಗೂ ಕೃಷ್ಣಪ್ಪ ಗಾರ್ಡನ್‌ನಲ್ಲಿರುವ ಮಸೀದಿ-ಇ-ಹುಸ್ನಾ ಸೇರಿ ಹಲವು ಮಸೀದಿ ಸಮಿತಿಗಳಿಗೆ ನಾನು ಕೊಟ್ಟಿರುವ ಚೆಕ್‌ಗಳನ್ನು ವಾಪಸ್‌ ನೀಡಿ, ಅದನ್ನು ಬಳಸಬೇಡಿ ಎಂದು ಕೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments