Webdunia - Bharat's app for daily news and videos

Install App

ಸ್ವಲ್ಪ ಲೇಟ್ ಆಗುತ್ತೆ, ಕೊಟ್ಟೇ ಕೊಡ್ತೀವಿ: ಅನ್ನಭಾಗ್ಯ ಅಕ್ಕಿ ಸಿಕ್ತಿಲ್ಲ ಎಂದರೆ ಮುನಿಯಪ್ಪ ರಿಯಾಕ್ಷನ್

Krishnaveni K
ಮಂಗಳವಾರ, 18 ಮಾರ್ಚ್ 2025 (15:04 IST)
ಬೆಂಗಳೂರು: ಸ್ವಲ್ಪ ಲೇಟ್ ಆಗ್ತಿದೆ, ಆದರೆ ಕೊಡುವುದನ್ನು ಕೊಟ್ಟೇ ಕೊಡುತ್ತೇವೆ ಎಂದು ಅನ್ನಭಾಗ್ಯ ಅಕ್ಕಿ  ವಿತರಣೆ ಬಗ್ಗೆ ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದಾರೆ.

ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಈ ತಿಂಗಳು 15 ಕೆ.ಜಿ. ಅಕ್ಕಿ ಕೊಡಬೇಕಾಗಿತ್ತು. ಇದುವರೆಗೆ 5 ಕೆ.ಜಿ ಬಾಬ್ತು ಹಣ ನೀಡಲಾಗುತ್ತಿತ್ತು. ಆದರೆ ಈ ತಿಂಗಳಿನಿಂದ ಹಣದ ಬದಲು ಅಕ್ಕಿಯನ್ನೇ ನೀಡುವುದಾಗಿ ಘೋಷಣೆ ಮಾಡಲಾಗಿತ್ತು.

ಆದರೆ ಈ ತಿಂಗಳಿನ ಪಡಿತರ ಪಡೆಯು ಹೋದ ಫಲಾನುಭವಿಗಳಿಗೆ ಶಾಕ್ ಆಗಿತ್ತು. ಬಹುತೇಕ ಜಿಲ್ಲೆಗಳಲ್ಲಿ ಪಡಿತರ ವಿತರಣಾ ಕೇಂದ್ರದಲ್ಲಿ ನೋ ಸ್ಟಾಕ್ ಬೋರ್ಡ್ ಕಂಡುಬಂದಿದೆ. ಇದರಿಂದಾಗಿ ಅತ್ತ ಹಣವೂ ಇಲ್ಲ ಇತ್ತ ಅಕ್ಕಿಯೂ ಇಲ್ಲ ಎಂದು ಫಲಾನುಭವಿಗಳು ಹಿಡಿಶಾಪ ಹಾಕಿದ್ದರು.

ಆದರೆ ಈ ಬಗ್ಗೆ ಈಗ ಸಚಿವರು ಸ್ಪಷ್ಟನೆ ನೀಡಿದ್ದರು. ಸ್ವಲ್ಪ ತಾಂತ್ರಿಕ ಸಮಸ್ಯೆಗಳಿಂದ ಈ ಬಾರಿ ಅಕ್ಕಿ ವಿತರಣೆ ಸ್ವಲ್ಪ ತಡವಾಗಿದೆ. ಇಷ್ಟು ದಿನ ಟ್ರಾನ್ಸ್ ಪೋರ್ಟ್ ಗಾಡಿಗಳು 5 ಕೆ.ಜಿ. ಅಕ್ಕಿ ಲಿಫ್ಟ್ ಮಾಡುತ್ತಿತ್ತು. ಈಗ 15 ಕೆ.ಜಿ. ಮಾಡಬೇಕಿದೆ. ಹೀಗಾಗಿ ಸ್ವಲ್ಪ ತಡವಾಗಿದೆ. ಆದರೆ ಈ ತಿಂಗಳೊಳಗಾಗಿ ಎಲ್ಲಾ ಕಡೆ ಕೊಟ್ಟೇ ಕೊಡ್ತೀವಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

ಮುಂದಿನ ಸುದ್ದಿ
Show comments