Webdunia - Bharat's app for daily news and videos

Install App

ಅಧಿಕಾರಿಗಳಿಗೆ ಕೆಡಿಪಿ ಸಭೆಯಲ್ಲಿ ಖಡಕ್ ಪಾಠ ಮಾಡಿದ ಸಚಿವ

Webdunia
ಭಾನುವಾರ, 23 ಸೆಪ್ಟಂಬರ್ 2018 (19:06 IST)
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳಿಗೆ ಖಡಕ್ ಪಾಠ ಮಾಡಿದರು.

ಯಾದಗಿರಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಎಂ. ಪಾಟೀಲ ಸಚಿವರಾದ ಬಳಿದ ಇದೇ ಮೊದಲ ಬಾರಿಗೆ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಿತು.

ಯಾದಗಿರಿ ಜಿಪಂ ಕೆಡಿಪಿ ಸಭೆಯಲ್ಲಿ ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ, ಅಭಿವೃದ್ಧಿಗಳ ಚರ್ಚಿಸಲಾಯಿತು. ಅಭಿವೃದ್ದಿ ವಿಷಯದಲ್ಲಿ ಕೆಲವು ಅಧಿಕಾರಿಗಳಿಗೆ ತರಾಟೆಗೆ ತಗೊಂಡು ಕೆಲಸದ ಕಡೆ ಗಮನಹರಿಸಿ ಎಂದು ಖಡಕ್ಕಾಗಿ ಸಚಿವ ರಾಜಶೇಖರ ಎಂ.ಪಾಟೀಲ ಪಾಠ ಮಾಡಿದರು. ಸಭೆಯಲ್ಲಿ ಪ್ರಮುಖವಾಗಿ ಶಿಕ್ಷಣದಲ್ಲಿ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ ಶಿಕ್ಷಣ ಇಲಾಖೆಯ ಅಧಿಕಾರಿಗಳು‌ ಗಮನ ಹರಿಸಬೇಕು ಎಂದರು. 2016-17ರ ಸಾಲಿನ ರೈತರಿಗೆ ಬರಬೇಕಾದ ಬೆಳೆ ವಿಮೆ ಇನ್ನು ಬಂದಿಲ್ಲ. ಇದರಿಂದ ಸಾವಿರಾರು ರೈತರಿಗೆ ಅನ್ಯಾಯ ಆಗ್ತಿದೆ. ಇದನ್ನು ಸರಿಪಡಿಸಲು ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಸುರಪುರ ಶಾಸಕ ರಾಜುಗೌಡ್ರು ಸಚಿವರಿಗೆ ಪ್ರಶ್ನಿಸಿದರು.

ರೈತರು ಬೆಳೆವಿಮೆಯ ಶುಲ್ಕಾನೇ 9 ಕೋಟಿ ಆಗಿದೆ. ಶೇ. 20% ರಷ್ಟಾದ್ರು ನಮ್ಮ ಜಿಲ್ಲೆಯ ರೈತ್ರಿಗೆ ಬೆಳೆ ವಿಮಾ ಬಂದಿಲ್ಲ. ಕೂಡಲೇ ಈ ಬಗ್ಗೆ ಒಂದು ಸಮಿತಿ ರಚನೆ ಮಾಡಿ ಈ ಬಗ್ಗೆ ಪರಿಶೀಲನೆ ಮಾಡಬೇಕು ಅಂತ ಜಿಲ್ಲಾ ಉಸ್ತುವಾರಿ ಸಚಿವರಿಗೆ ರಾಜುಗೌಡ್ರು ಒತ್ತಾಯ ಮಾಡಿದರು. ರೈತರು ಹಾವು ಕಡಿದು ಸತ್ತವರಿಗೆ ಪರಿಹಾರ ನಿಧಿ ಕೊಡಿ ಅಂದ್ರೆ ಇಲಾಖೆಯಲ್ಲಿ ದುಡ್ಡಿಲ್ಲ ಅಂತ ಹೇಳುತ್ತಾರೆಂದು ಯಾದಗಿರಿ ಶಾಸಕ ವೆಂಕರಡ್ಡಿ ಮುದ್ನಾಳ ಕೃಷಿ ಇಲಾಖೆ ಅಧಿಕಾರಿ ದೇವಿಕಾ ವಿರುದ್ದ ಸಚಿವರ ಸಮ್ಮುಖದಲ್ಲೇ ಗರಂ ಆದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments