Webdunia - Bharat's app for daily news and videos

Install App

ಅಧಿಕಾರಿಗಳಿಗೆ ಕೆಡಿಪಿ ಸಭೆಯಲ್ಲಿ ಖಡಕ್ ಪಾಠ ಮಾಡಿದ ಸಚಿವ

Webdunia
ಭಾನುವಾರ, 23 ಸೆಪ್ಟಂಬರ್ 2018 (19:06 IST)
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳಿಗೆ ಖಡಕ್ ಪಾಠ ಮಾಡಿದರು.

ಯಾದಗಿರಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಎಂ. ಪಾಟೀಲ ಸಚಿವರಾದ ಬಳಿದ ಇದೇ ಮೊದಲ ಬಾರಿಗೆ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಿತು.

ಯಾದಗಿರಿ ಜಿಪಂ ಕೆಡಿಪಿ ಸಭೆಯಲ್ಲಿ ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ, ಅಭಿವೃದ್ಧಿಗಳ ಚರ್ಚಿಸಲಾಯಿತು. ಅಭಿವೃದ್ದಿ ವಿಷಯದಲ್ಲಿ ಕೆಲವು ಅಧಿಕಾರಿಗಳಿಗೆ ತರಾಟೆಗೆ ತಗೊಂಡು ಕೆಲಸದ ಕಡೆ ಗಮನಹರಿಸಿ ಎಂದು ಖಡಕ್ಕಾಗಿ ಸಚಿವ ರಾಜಶೇಖರ ಎಂ.ಪಾಟೀಲ ಪಾಠ ಮಾಡಿದರು. ಸಭೆಯಲ್ಲಿ ಪ್ರಮುಖವಾಗಿ ಶಿಕ್ಷಣದಲ್ಲಿ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ ಶಿಕ್ಷಣ ಇಲಾಖೆಯ ಅಧಿಕಾರಿಗಳು‌ ಗಮನ ಹರಿಸಬೇಕು ಎಂದರು. 2016-17ರ ಸಾಲಿನ ರೈತರಿಗೆ ಬರಬೇಕಾದ ಬೆಳೆ ವಿಮೆ ಇನ್ನು ಬಂದಿಲ್ಲ. ಇದರಿಂದ ಸಾವಿರಾರು ರೈತರಿಗೆ ಅನ್ಯಾಯ ಆಗ್ತಿದೆ. ಇದನ್ನು ಸರಿಪಡಿಸಲು ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಸುರಪುರ ಶಾಸಕ ರಾಜುಗೌಡ್ರು ಸಚಿವರಿಗೆ ಪ್ರಶ್ನಿಸಿದರು.

ರೈತರು ಬೆಳೆವಿಮೆಯ ಶುಲ್ಕಾನೇ 9 ಕೋಟಿ ಆಗಿದೆ. ಶೇ. 20% ರಷ್ಟಾದ್ರು ನಮ್ಮ ಜಿಲ್ಲೆಯ ರೈತ್ರಿಗೆ ಬೆಳೆ ವಿಮಾ ಬಂದಿಲ್ಲ. ಕೂಡಲೇ ಈ ಬಗ್ಗೆ ಒಂದು ಸಮಿತಿ ರಚನೆ ಮಾಡಿ ಈ ಬಗ್ಗೆ ಪರಿಶೀಲನೆ ಮಾಡಬೇಕು ಅಂತ ಜಿಲ್ಲಾ ಉಸ್ತುವಾರಿ ಸಚಿವರಿಗೆ ರಾಜುಗೌಡ್ರು ಒತ್ತಾಯ ಮಾಡಿದರು. ರೈತರು ಹಾವು ಕಡಿದು ಸತ್ತವರಿಗೆ ಪರಿಹಾರ ನಿಧಿ ಕೊಡಿ ಅಂದ್ರೆ ಇಲಾಖೆಯಲ್ಲಿ ದುಡ್ಡಿಲ್ಲ ಅಂತ ಹೇಳುತ್ತಾರೆಂದು ಯಾದಗಿರಿ ಶಾಸಕ ವೆಂಕರಡ್ಡಿ ಮುದ್ನಾಳ ಕೃಷಿ ಇಲಾಖೆ ಅಧಿಕಾರಿ ದೇವಿಕಾ ವಿರುದ್ದ ಸಚಿವರ ಸಮ್ಮುಖದಲ್ಲೇ ಗರಂ ಆದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments