ಗಣೇಶ ಹಬ್ಬಕ್ಕೆ ಚಂದಾ ವಸೂಲಿ ಮಾಡುವವರಿಗೆ ಜಿಲ್ಲಾಧಿಕಾರಿಗಳಿಂದ ಖಡಕ್ ಎಚ್ಚರಿಕೆ

Webdunia
ಗುರುವಾರ, 30 ಆಗಸ್ಟ್ 2018 (11:12 IST)
ಚಿಕ್ಕಬಳ್ಳಾಪುರ : ಮುಂದೆ ಬರುವ ಗಣೇಶ ಹಬ್ಬಕ್ಕೆ ಚಂದಾ ವಸೂಲಿ ಮಾಡುವವರಿಗೆ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಎಚ್ಚರಿಕೆಯೊಂದನ್ನು  ನೀಡಿದ್ದಾರೆ.


ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅನಿರುದ್ಧ್ ಶ್ರವಣ್ , ಗಣೇಶ ಹಬ್ಬದಲ್ಲಿ, ಪಟಾಕಿ ಸಿಡಿಸಿ, ಡಿಜೆ ಸೌಂಡ್ ಸಿಸ್ಟಮ್ ಗಳನ್ನ ಅಳವಡಿಸಿ ಪರಿಸರ ಮಾಲಿನ್ಯ ಮಾಡುವಂತೆ ಯಾವ ಶಾಸ್ತ್ರ ಸಂಪ್ರದಾಯದಲ್ಲೂ ಹೇಳಿಲ್ಲ. ಗಣೇಶ ಪ್ರತಿಷ್ಠಾಪನೆ ಹೆಸರಿನಲ್ಲಿ ಬಲವಂತವಾಗಿ ಸಾರ್ವಜನಿಕರಿಂದ ಚಂದಾ ವಸೂಲಿ ಮಾಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.


ಒಂದು ವೇಳೆ ಜನರೇ ಚಂದಾ ಕೊಡಲು ಇಷ್ಟ ಪಟ್ಟರೆ ವಿಶ್ವಾಸವಿರುವ ಸಂಘ ಸಂಸ್ಥೆಗಳಿಗೆ ಮಾತ್ರ ನಿಮ್ಮ ಹಣವನ್ನು ನೀಡಬಹುದು. ಗಣೇಶ ವಿಗ್ರಹ ಪ್ರತಿಷ್ಠಾಪಿಸುವ ಸಂಘ ಅಥವಾ ವ್ಯಕ್ತಿ ಜಿಲ್ಲಾಡಳಿತದ ನಿಯಮಗಳನ್ನು ಪಾಲಿಸಬೇಕಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವಂತೆ ಜಿಲ್ಲಾಧಿಕಾರಿಗಳು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments