Webdunia - Bharat's app for daily news and videos

Install App

ನ್ಯಾಯಾಲಯಕ್ಕೇ ಮೋಸ ಮಾಡ್ತಿದ್ದ ಖದೀಮರು..! ?

Webdunia
ಭಾನುವಾರ, 24 ಏಪ್ರಿಲ್ 2022 (09:34 IST)
ಬೆಂಗಳೂರು :  ಹಣದಾಸೆಗೆ ಜೈಲಿನಲ್ಲಿರುವ ಆರೋಪಿಗಳಿಗೆ ಜಾಮೀನಿಗೆ ಕೊಡಿಸಲು ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಸಿ ಶ್ಯೂರಿಟಿ ನೀಡುತ್ತಿದ್ದ 9 ಜನರ ತಂಡವನ್ನು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
 
ಸಂಜೀವಿನಿ ನಗರದ ಪುಟ್ಟಸ್ವಾಮಿ, ಮಧುಗಿರಿಯ ನಸ್ರೀನ್, ನಗರದ ಜಗದೀಶ್ ಅಲಿಯಾಸ್ ಬಾಂಬೆ, ಚಂದ್ರೇಗೌಡ, ಸೊನ್ನೇಗೌಡ, ವೆಂಕಟೇಶ್, ಶಿಕ್ಷಣ ಇಲಾಖೆಯ ‘ಡಿ’ ಗ್ರೂಪ್ ನೌಕರ ಅಂಜಿನಪ್ಪ, ಮಂಜುನಾಥ, ರಾಜಣ್ಣ ಬಂಧಿತರು.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ನಕಲಿ ಸೀಲುಗಳು, ನಕಲಿ ಪಹಣಿಗಳು, ಕಂಪ್ಯೂಟರ್, ಪ್ರಿಂಟರ್, ಸ್ಕಾ್ಯನರ್, ಲ್ಯಾಮಿನೇಷನ್ ಮಿಷನ್, ಆಟೋ ರಿಕ್ಷಾ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ಪುಟ್ಟಸ್ವಾಮಿ ಜೈಲಿನಲ್ಲಿರುವ ಆರೋಪಿಗಳನ್ನು ಸಂಪರ್ಕಿಸಿ ಜಾಮೀನಿಗೆ ಶ್ಯೂರಿಟಿ ಕೊಡಿಸುವುದಾಗಿ ವ್ಯವಹಾರ ಕುದುರಿಸುತ್ತಿದ್ದ. ಬಳಿಕ ತನ್ನ ಸಹಚರರ ಜತೆ ತಾಲೂಕು ಕಚೇರಿಗಳಿಗೆ ತೆರಳಿ ರೈತರು ಎಂದು ಹೇಳಿಕೊಂಡು ರೈತರ ಪಹಣಿ ಮತ್ತು ಮ್ಯೂಟೇಷನ್ಗಳನ್ನು ಪಡೆಯುತ್ತಿದ್ದರು.

ಬಳಿಕ ಆರೋಪಿ ಮಂಜುನಾಥ್ ಹಾಗೂ ನಸ್ರೀನ್ ಮೂಲಕ ಪಹಣಿಯಲ್ಲಿರುವ ವ್ಯಕ್ತಿಯ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ತಯಾರಿಸುತ್ತಿದ್ದರು. ಬಳಿಕ ಶಿಕ್ಷಣ ಇಲಾಖೆಯ ಡಿ ಗ್ರೂಪ್ ನೌಕರ ಅಂಜಿನಪ್ಪನ ನೆರವಿನಿಂದ ನಕಲಿ ಸೀಲು ಬಳಸಿಕೊಂಡು ಶ್ಯೂರಿಟಿ ಬಾಂಡ್ ದೃಢಿಕರಿಸಿ ದಾಖಲೆ ಸಿದ್ಧಪಡಿಸಿ ವಕೀಲರ ಮೂಲಕ ನಕಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತಿದ್ದರು. ಆರೋಪಿಗಳ ಜಾಮೀನಿಗೆ ಶ್ಯೂರಿಟಿ ನೀಡುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments