Webdunia - Bharat's app for daily news and videos

Install App

ಚಾಕೋಲೆಟ್ ಆಸೆ ತೋರಿಸಿ ಮಕ್ಕಳನ್ನು ಅಪಹರಿಸಲು ಖದೀಮರು ವಿಫಲ

Webdunia
ಗುರುವಾರ, 4 ನವೆಂಬರ್ 2021 (21:37 IST)
ಬೆಂಗಳೂರು: ಚಾಕೋಲೆಟ್ ಆಸೆ ತೋರಿಸಿ ಮಕ್ಕಳನ್ನು ಅಪಹರಿಸಲು ಖದೀಮರು ವಿಫಲ ಯತ್ನ ನಡೆಸಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.
ವಿದ್ಯಾರಣ್ಯಪುರದ ಅಪಾರ್ಟ್​ಮೆಂಟ್​ವೊಂದರ ಬಳಿ ಘಟನೆ ನಡೆದಿದ್ದು, ಸ್ಥಳೀಯರ ಸಮಯ ಪ್ರಜ್ಞೆಯಿಂದ ಮಕ್ಕಳ ಅಪಹರಣ ತಪ್ಪಿದೆ. ಮೂವರು ಅಪರಿಚಿತರು ಅಪಹರಣ ಮಾಡಲು ಯತ್ನಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಏನಿದು ಘಟನೆ: ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಮಕ್ಕಳು ಮನೆ ಸಮೀಪ ಆಟ ಆಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಮೂವರು ಅಪರಿಚಿತ ವ್ಯಕ್ತಿಗಳು, ಮಕ್ಕಳಿಗೆ ಚಾಕೋಲೆಟ್ ಕೊಡಿಸುವುದಾಗಿ ಆಸೆ ತೋರಿಸಿದ್ದಾರೆ. ಆಗ ಒಬ್ಬ ಬಾಲಕ ಖದೀಮರ ಹಿಂದೆ ಹೋಗಲು ಯತ್ನಿಸಿದ್ದಾನೆ. ಅನಂತರ ಮತ್ತೊಬ್ಬ ಅಪರಿಚಿತ ವ್ಯಕ್ತಿ ಅಲ್ಲಿದ್ದ ಐದಾರು ಮಕ್ಕಳಿಗೂ ಚಾಕೊಲೆಟ್ ಕೊಡಿಸುವುದಾಗಿ ಪುಸಲಾಯಿಸಿ ಕರೆದೊಯ್ಯಲು ಯತ್ನಿಸಿದ್ದಾನೆ. ಅಪರಿಚಿತನ ಹಿಂದೆ ಮಕ್ಕಳು ಹೋಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅನುಮಾನಗೊಂಡು ಆತನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಭಯದಲ್ಲಿ ಮೂವರು ಅಪರಿಚಿತರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಕುರಿತು ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments