ಶಾರೀಕ್ ಜಾತಕ ಕೆದಕಿದ ಖಾಕಿ ಪಡೆ

Webdunia
ಮಂಗಳವಾರ, 22 ನವೆಂಬರ್ 2022 (19:11 IST)
ಕುಕ್ಕರ್​​​ ಬಾಂಬ್​​​​ ಸ್ಫೋಟಕ್ಕೆ ತಯಾರಿ ನಡೆಸಿದ್ದ ಉಗ್ರ ಶಾರೀಕ್ ಜಾತಕವನ್ನು ಪೊಲೀಸರು ಕೆದಕಿದ್ದು,  ಭಯಾನಕ ಮಾಹಿತಿ ಬಹಿರಂಗವಾಗಿದೆ. ಈತ ಬಾಂಬ್​ ತಯಾರಿಕೆಯಲ್ಲಿ ಸಿದ್ಧಹಸ್ತನಾಗಿದ್ದ ಎಂದು ತಿಳಿದು ಬಂದಿದೆ. ಈತ ಬೇರೆಯವರಿಗೆ ಬಾಂಬ್ ತಯಾರಿಸುವುದು ಹೇಗೆಂದು ಟ್ರೈನಿಂಗ್ ಕೂಡಾ ಕೊಡ್ತಿದ್ದ ಎಂಬ ಮಾಹಿತಿ ಬಹಿರಂಗವಾಗಿದೆ. ಶಾರಿಕ್​​​ ಐಸಿಸ್​ನ ಅಧಿಕೃತ ಮಾಧ್ಯಮ ಕೇಂದ್ರ ಅಲ್ - ಹಯಾತ್​ನಲ್ಲಿ​ ಸಕ್ರಿಯವಾಗಿದ್ದ. ಅಲ್​ ಹಯಾತ್​ ಸದಸ್ಯರಾಗಿದ್ದ ಇಬ್ಬರು ಸಹಚರರಿಗೆ ಶಾರೀಕ್ ಟ್ರೈನಿಂಗ್ ಕೂಡ ನೀಡಿದ್ನಂತೆ. ಟೆಲಿಗ್ರಾಮ್, ಇನ್​ಸ್ಟಾಗ್ರಾಮ್, ವೈರ್, ಎಲಿಮೆಂಟ್​ ಆ್ಯಪ್​ಗಳಲ್ಲಿ  ಬಾಂಬ್ ತಯಾರಿಸುವ ವಿಡಿಯೋಗಳನ್ನು, PDF ದಾಖಲೆಗಳನ್ನೂ ಆತ ಹಂಚಿಕೊಂಡಿದ್ದ. ISIS, ಭಯೋತ್ಪಾದನೆ ಕೆಲಸಗಳಿಗೆ ಸಂಬಂಧಿಸಿದ ಆಡಿಯೋ, ವಿಡಿಯೋ ಲಿಂಕ್​​ಗಳನ್ನು ಆತ ಶೇರ್​​ ಮಾಡಿದ್ದ. ಶಾರೀಕ್​​​ ಯಾಸಿನ್​ ಜೊತೆ ಸತತ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ತಿಳಿದು ಬಂದಿದೆ. ಶಿವಮೊಗ್ಗದ ತುಂಗಾ ನದಿ ದಡದಲ್ಲಿ ಬಾಂಬ್​ ಪ್ರಾಯೋಗಿಕ ಸ್ಫೋಟ ಯಶಸ್ವಿಗೊಳಿಸಿದ್ದು, ವಿಧ್ವಂಸಕ ಕೃತ್ಯಗಳ ಮೂಲಕ ಜನರಲ್ಲಿ ಭಯ ಹುಟ್ಟುಹಾಕಲು ಕಿರಾತಕ ಪ್ಲ್ಯಾನ್ ಮಾಡ್ಕೊಂಡಿದ್ದ ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಕ್ರಿಪ್ಟೊ ಕರೆನ್ಸಿ ಮೂಲಕ ಉಗ್ರ ಶಾರೀಕ್ ವ್ಯವಹರಿಸುತ್ತಿದ್ದು, ಸಹಚರರಿಗೆ ಕ್ರಿಪ್ಟೊ ಕರೆನ್ಸಿ ರೂಪದಲ್ಲಿ ಹಣ ವರ್ಗಾವಣೆ ಮಾಡ್ತಿದ್ದ. ಶಾರೀಕ್​​ಗೆ ಮುಸ್ಲಿಂ ರಾಷ್ಟ್ರಗಳಿಂದ ಲಕ್ಷ ಲಕ್ಷ ಹಣ  ಹರಿದು ಬರ್ತಿದ್ದು, ಶಾರೀಕ್ ಸಹೋದರಿ ಅಕೌಂಟಿಗೆ ಬಯಸಿದಾಗಲೆಲ್ಲಾ ಹಣ ಬರ್ತಿತ್ತು ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್ ಬಿಡುಗಡೆ: ಮೋದಿ ಸರ್ಕಾರದಿಂದ ಬಡವರಿಗೆ ಗಿಫ್ಟ್

Karnataka Weather: ವಾರಂತ್ಯದಲ್ಲಿ ಈ ಜಿಲ್ಲೆಗಳಿಗೆ ಮಳೆ ಸೂಚನೆ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಮುಂದಿನ ಸುದ್ದಿ
Show comments