Webdunia - Bharat's app for daily news and videos

Install App

ಆನಂದ್​​​​​ ಸಿಂಗ್​​​​​​​​​​​​​ ಟೀಕಿಸಿದ ಖಂಡ್ರೆ

Webdunia
ಮಂಗಳವಾರ, 17 ಜನವರಿ 2023 (19:40 IST)
ಹೊಸಪೇಟೆಯಲ್ಲಿ ಕಾಂಗ್ರೆಸ್‌ ಕೈಗೊಂಡಿರುವ ‘ಪ್ರಜಾಧ್ವನಿ’ ರಥಯಾತ್ರೆಯಲ್ಲಿ ಸಚಿವ ಆನಂದ್​​​​​ ಸಿಂಗ್​​​​ರನ್ನ ಈಶ್ವರ್​​​​​ ಖಂಡ್ರೆ ​​  ಟೀಕಿಸಿದ್ದಾರೆ. 'ಯಾವ ಪಕ್ಷದಿಂದ ಗೆದ್ದಿದ್ದಾರೆ ಅದರ ಬೆನ್ನಿಗೆ ಚೂರಿ ಹಾಕಿದ್ದಾರೆ. ನಿಮ್ಮ ಕ್ಷೇತ್ರದ ಶಾಸಕರೇ ಮಾರಾಟ ಆಗಿದ್ದಾರೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ಹೆಸರು ಹೇಳದೆ ಟೀಕಿಸಿದರು. ಇಲ್ಲಿ ಮಂಗಳವಾರ ಏರ್ಪಡಿಸಿರುವ ಪ್ರಜಾ ಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷವು ಆಪರೇಷನ್ ಕಮಲದ ಮೂಲಕ ಶಾಸಕರನ್ನು ಖರೀದಿಸಿ ರಾಜ್ಯದಲ್ಲಿ ಸರ್ಕಾರ ಮಾಡಿದೆ. ನಿಮ್ಮ ಕ್ಷೇತ್ರದ ಶಾಸಕರೇ ಮಾರಾಟ ಆಗಿದ್ದಾರೆ. ಇವರನ್ನು ಮನೆಗೆ ಕಳಿಸಬೇಕಲ್ಲವೇ? ಎಂದು ಪ್ರಶ್ನಿಸಿದರು. ಬಿಜೆಪಿ ಸರ್ಕಾರ ಬಂದ ನಂತರ ರಾಜ್ಯದಲ್ಲಿ ಪ್ರತಿಯೊಂದರಲ್ಲೂ ಹಗರಣಗಳು ನಡೆದಿವೆ. ಜಾತಿ, ಧರ್ಮದ ಹೆಸರಲ್ಲಿ ಜನರನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಸತತ ಅಪ ಪ್ರಚಾರ ಮಾಡುತ್ತಿದ್ದಾರೆ. ಆದರೆ, ಈ ಚುನಾವಣೆಯಲ್ಲಿ ಅವರು ಸೋಲುವುದು ಖಚಿತ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments