Webdunia - Bharat's app for daily news and videos

Install App

ಅಂಬೇಡ್ಕರ ಅವರು ಬೌದ್ಧ ಧರ್ಮ ಸ್ವೀಕರಿಸಿದ್ದರಿಂದ ದೇಶ ಒಗ್ಗಟ್ಟು ಎಂದ ಖರ್ಗೆ

Webdunia
ಶುಕ್ರವಾರ, 19 ಅಕ್ಟೋಬರ್ 2018 (20:16 IST)
ಭಾರತದಲ್ಲಿ ಹುಟ್ಟಿರುವ ಬೌದ್ಧ ಧರ್ಮವನ್ನು ಅಂಬೇಡ್ಕರರು ಸ್ವೀಕರಿಸುವ ಮೂಲಕ ದೇಶವನ್ನು ಒಗ್ಗೂಡಿಸಿದ್ದಾರೆ. ಅವರು ಬೌದ್ಧ ಧರ್ಮದ ದೀಕ್ಷೆ ಪಡೆಯುವ ಮೂಲಕ ದೇಶದ ಎಲ್ಲ ಜನರನ್ನು ಒಗ್ಗಟ್ಟಾಗಿಸಿದ್ದಾರೆ ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಲಬುರಗಿಯ ಬುದ್ಧಮಂದಿರದಲ್ಲಿ ಜರುಗಿದ 62ನೇ ಧಮ್ಮ ಚಕ್ರ ಪರಿವರ್ತನಾ ದಿನಾಚರಣೆಯ ಅಧ್ಯಕ್ಷತೆವಹಿಸಿ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರು ಹಾಗೂ ಇತ್ತೀಚೆಗೆ ಅಂಬೇಡ್ಕರ ಅವರು ದೇಶದಲ್ಲಿ ಧರ್ಮ ಉಳಿಸುವ ಕಾರ್ಯ ಮಾಡಿದ್ದಾರೆ. ಇದರಿಂದಲೇ ಹಿಂದೂ ಧರ್ಮ ದೇಶದಲ್ಲಿ ಗಟ್ಟಿಯಾಗಿ ನೆಲೆಯೂರಿದೆ ಎಂದರು.

ದೇಶದಲ್ಲಿ ಧರ್ಮ ಸುಧಾರಣೆ ಮಾಡಿದ ಅನೇಕ ಮುಖಂಡರ ಹಾಗೂ ಶರಣರ ಮೇಲೆ ಬುದ್ಧನ ತತ್ವಗಳ ಪ್ರಭಾವ ಬೀರಿದೆ. ಗೌತಮ ಬುದ್ಧರ ಅಷ್ಟಾಂಗ ಮಾರ್ಗಗಳ ಬಗ್ಗೆ ತಮ್ಮ ತತ್ವಗಳಲ್ಲಿ ತಿಳಿಸಿದ್ದಾರೆ.  ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರು ಹೇಳಿದ ಅರಿಷಡ್ವರ್ಗಗಳ ನಿಗ್ರಹ ಇದಕ್ಕೆ ಪೂರಕವಾಗಿದೆ. ಬೌದ್ಧ ಧರ್ಮದ ತತ್ವಗಳನ್ನು ಸಮಾಜ ಸುಧಾರಕರೆಲ್ಲರೂ ಒಪ್ಪಿಕೊಂಡು ಅದರ ಪ್ರಭಾವವನ್ನು ಸಮಾಜದ ಮೇಲೆ ಮೂಡಿಸಿದ್ದಾರೆ ಎಂದರು.

ಅಂಬೇಡ್ಕರ್ ಅವರ ಜೊತೆಗೆ ಅನೇಕ ಮುಖಂಡರು ಧಮ್ಮ ದೀಕ್ಷೆ ಪಡೆದಿದ್ದರು. ಅವರೆಲ್ಲರೂ ಕಲಬುರ್ಗಿಗೆ ಬಂದು ಹೋಗಿದ್ದಾರೆ. ಅಂಬೇಡ್ಕರ್ ಅವರು ಎಲ್ಲ ಜನರ ನಾಯಕರಾಗಿದ್ದಾರೆ ಆದರೆ ಕೆಲವರು ದಲಿತ ಜನಾಂಗದ ನಾಯಕರೆಂದು ಬಿಂಬಿಸುತ್ತಾರೆ. ಅದು ಬೇಸರದ ಸಂಗತಿಯಾಗಿದೆ. ಮನುಷ್ಯರೆಲ್ಲರೂ ಒಂದೇ ಎಂದು ಅಂಬೇಡ್ಕರ್ ಅವರು ಹೋರಾಟ ಮಾಡಿದ್ದರು. ಇಂದು ಗಂಡು ಮತ್ತು ಹೆಣ್ಣುಗಳಲ್ಲಿ ಭೇದ ಮೂಡಿಸುವಲ್ಲಿ ಕೆಲವರು ತೊಡಗಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments