Webdunia - Bharat's app for daily news and videos

Install App

ಖತರ್ನಾಕ್​ ಕಳ್ಳ ಅಂದರ್​

Webdunia
ಗುರುವಾರ, 20 ಅಕ್ಟೋಬರ್ 2022 (21:11 IST)
ಕಂಡವರ ಮನೆಗೆ ಕನ್ನಹಾಕಿ, ಉಳಿದ ಹಣವನ್ನು ಧಾರ್ಮಿಕ ಕೇಂದ್ರಗಳಿಗೆ ದಾನ ಮಾಡುತ್ತಿದ್ದ ವಿಚಿತ್ರ ಕಳ್ಳನನ್ನು ಬೆಂಗಳೂರಿನ ಮಡಿವಾಳ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜಾನ್ ಮೆಲ್ವಿನ್ ಬಂಧಿತ ಆರೋಪಿಯಾಗಿದ್ದಾನೆ. ಈ ಪುಣ್ಯಾತ್ಮ ಐಷಾರಾಮಿ ಲೈಫ್, ಬ್ರ್ಯಾಂಡೆಡ್ ಜೀವನಕ್ಕಾಗಿ ಕಳ್ಳತನ ಮಾಡುತ್ತಿದ್ದ, ಆಸೆ ತೀರಿ ಉಳಿದ ಹಣದಲ್ಲಿ ಚರ್ಚ್, ದೇವಾಲಯಗಳ ಹುಂಡಿಗೆ ಹಣ ಹಾಕುವುದು, ಹಾಗೂ ದಾನ ಮಾಡುವ ಕಾಯಕ ಮಾಡುತ್ತಿದ್ದ ಎಂಬುದು ವಿಚಾರಣೆ ವೇಳೆ ಸತ್ಯ ಬಯಲಾಗಿದೆ. ಈತನ ವಿರುದ್ಧ ಬರೋಬ್ಬರಿ ಐವತ್ತಕ್ಕೂ ಅಧಿಕ‌ ಪ್ರಕರಣಗಳು ದಾಖಲಾಗಿವೆ. ಪೀಣ್ಯಾ, ವಿಜಯನಗರ, ಕಾಮಾಕ್ಷಿಪಾಳ್ಯ, ಕೆಂಗೇರಿ ಸೇರಿದಂತೆ ವಿವಿಧೆಡೆ ಪ್ರಕರಣಗಳಿದ್ದವು. ನಗರದ ಅತೀ ಹಳೆಯ ಮನೆಗಳ್ಳರಲ್ಲಿ ಮೆಲ್ವಿನ್ ಕೂಡಾ ಒಬ್ಬನಾಗಿದ್ದು. ಮೆಲ್ವಿನ್ ಪ್ರತೀ ಬಾರಿ‌ ಬಂಧನವಾಗಲೂ 10-15 ದಿನಗಳಲ್ಲೇ ಜಾಮೀನು ಪಡೆಯುತ್ತಿದ್ದ. ಈ ಸಂಬಂಧ ಮಡಿವಾಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments