Publish Date: Fri, 28 Apr 2023 (11:48 IST)
Updated Date: Fri, 28 Apr 2023 (11:37 IST)
ಕಳೆದ ಎರಡು ದಿನಗಳಿಂದ ಬಿಟ್ಟೂ ಬಿಡದೇ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ ಕಿಚ್ಚ ಸುದೀಪ್. ಇಂದು ಹಾವೇರಿ ಜಿಲ್ಲೆಯ ಹಿರೇಕೆರೂರು ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಅವರು ಬಿರುಸಿನ ಪ್ರಚಾರ ಕೈಗೊಂಡಿದ್ದರು.
ಮೊನ್ನೆ ಚಿತ್ರದುರ್ಗ, ದಾವಣೆಗೆರೆ ಸೇರಿದಂತೆ ಐದು ಕ್ಷೇತ್ರಗಳ ಪ್ರಚಾರದಲ್ಲಿ ಭಾಗಿಯಾಗಿದ್ದರು. ನಾಳೆ ಗದಗ ಜಿಲ್ಲೆಯ ಹಲವು ಕ್ಷೇತ್ರಗಳ ಪ್ರಚಾರದಲ್ಲಿ ತೊಡಗಲಿದ್ದಾರಂತೆ. ನೆಚ್ಚಿನ ನಟನನ್ನು ಬರಮಾಡಿಕೊಳ್ಳಲು ಕೇವಲ ಬಿಜೆಪಿ ಕಾರ್ಯಕರ್ತರು ಮಾತ್ರವಲ್ಲ, ಕಿಚ್ಚನ ಅಭಿಮಾನಿಗಳು ಕೂಡ ತುದಿಗಾಲಲ್ಲಿ ನಿಂತಿದ್ದಾರೆ.
ಈಗಾಗಲೇ ಗದಗ ತುಂಬಾ ಕಿಚ್ಚನ ಕಟೌಟ್ ಮತ್ತು ಬ್ಯಾನರ್ಸ್ ರಾರಾಜಿಸುತ್ತಿವೆ. ಗದಗ ಬಿಜೆಪಿ ಕ್ಷೇತ್ರದ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಸೇರಿದಂತೆ ಹಲವು ಅಭ್ಯರ್ಥಿಗಳ ಪರವಾಗಿ ಕಿಚ್ಚ ಮತಯಾಚನೆ ಮಾಡಲಿದ್ದಾರೆ.