Webdunia - Bharat's app for daily news and videos

Install App

ಬಾದಾಮಿ ಗೆಲ್ಲಲು ಸಿಎಂ ಸಿದ್ದರಾಮಯ್ಯಗೆ ಕಿಚ್ಚ ಸುದೀಪ್ ನೆರವು!

Webdunia
ಗುರುವಾರ, 3 ಮೇ 2018 (21:50 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಕಿಚ್ಚ ಸುದೀಪ್ ನಡುವಿನ ಸಂಧಾನ ಕೊನೆಗೂ ಫಲ ಕೊಟ್ಟಿದೆ. ಕಿಚ್ಚನ ರಾಜಕೀಯ ಜರ್ನಿಗೆ ಈ ಮೂಲಕ ಚಾಲನೆ ಸಿಕ್ಕಿದೆ.

ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಇದೀಗ ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಪರ ಪ್ರಚಾರ ನಡೆಸಲಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ಖಚಿತಪಡಿಸಿದೆ.

ಬಾದಾಮಿ ಜತೆಗೆ ಸಿದ್ದರಾಮಯ್ಯ ಸ್ಪರ್ಧಿಸುವ ಚಾಮುಂಡೇಶ್ವರಿ ಕ್ಷೇತ್ರದಲ್ಲೂ ಪ್ರಚಾರ ನಡೆಸಲು ಸುದೀಪ್ ಬಳಿ ಕೇಳಿಕೊಳ್ಳಲಾಗಿದ್ದು, ಸಮಯ ಸಿಕ್ಕರೆ ಅಲ್ಲೂ ಪ್ರಚಾರ ನಡೆಸುವ ಭರವಸೆ ಕೊಟ್ಟಿದ್ದಾರೆ ಎನ್ನಲಾಗಿದೆ.

ಅಷ್ಟಕ್ಕೇ ಕಿಚ್ಚ ಕಾಂಗ್ರೆಸ್ ಪಾಳಯ ಸೇರಿಕೊಂಡರು ಎಂದುಕೊಳ್ಳಬೇಕಾಗಿಲ್ಲ. ಸುರಪುರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೂಗೌಡ ಪರವೂ ಸುದೀಪ್ ಪ್ರಚಾರ ಮಾಡಲಿದ್ದಾರೆ. ‘ನಾನು ಕಲಾವಿದ. ನನಗೆ ಯಾವುದೇ ಪಕ್ಷದ ಹಂಗಿಲ್ಲ. ರಾಜೂಗೌಡ ನನ್ನ ಕುಟುಂಬದ ಸದಸ್ಯನಿದ್ದಂತೆ. ಅದಕ್ಕೇ ಪ್ರಚಾರ ನಡೆಸುತ್ತೇನೆ’ ಎಂದು ಕಿಚ್ಚ ಹೇಳಿಕೊಂಡಿರುವುದಾಗಿ ವರದಿಯಾಗಿದೆ. ಅದೇನೇ ಇರಲಿ, ಸಿಎಂ ಪರ ಕಿಚ್ಚ ಬಾದಾಮಿಯಲ್ಲಿ ಮೇ 9 ರಂದು ಪ್ರಚಾರ ನಡೆಸಲಿದ್ದು, ಅದರತ್ತ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments