Webdunia - Bharat's app for daily news and videos

Install App

ಸಾಲ ಮರಳಿಸದಿದ್ದಕ್ಕೆ ಮಗುವನ್ನು ಅಪಹರಿಸಿದ್ರು…!

Webdunia
ಭಾನುವಾರ, 14 ಅಕ್ಟೋಬರ್ 2018 (15:39 IST)
ಸಾಲ ಹಿಂತಿರುಗಿಸದ್ದಿದ್ದಕ್ಕೆ ಮಗುವನ್ನು ಕಿಡ್ನಾಪ್ ಮಾಡಿದ ಘಟನೆ ನಡೆದಿದೆ.

ಭದ್ರಾವತಿಯಲ್ಲಿ ಈ ಘಟನೆ ನಡೆದಿದೆ. ಕಳೆದ ಐದು ದಿನಗಳ ಹಿಂದೆ ಒಂಬತ್ತು ತಿಂಗಳ ಮಗುವನ್ನು ಹೊತ್ತೊಯ್ಯದ ಚಂದ್ರ ಮೋಹನ್ ಎಂಬ ಅಸಾಮಿ, ತಾನು ಕೊಟ್ಟ ಸಾಲ ಮರಳಿಸದ ಕಾರಣ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಆನೇಕಲ್ ನ ಕಿತ್ತಾಗನಹಳ್ಳಿ ಯಲ್ಲಿ ವಾಸವಿದ್ದ ಕುಟುಂಬವನ್ನು ಭದ್ರಾವತಿಗೆ ಕರೆಸಿಕೊಂಡು ಮಗುವನ್ನು ಹೊತ್ತೊಯ್ಯದ ವ್ಯಕ್ತಿ ಪರಾರಿಯಾಗಿದ್ದಾನೆ.

ಚಂದ್ರ ಮೋಹನ್  ಎಂಬಾತನ ಬಳಿ ವಿನಾಯಕ್ ಎಂಬಾತ ಸಾಲ ಪಡೆದಿದ್ದನು. ಮಗುವಿನ ಚಿಕಿತ್ಸೆಗೆಂದು ಒಂದು ವರ್ಷದ ಹಿಂದೆ ಮೂವತ್ತು ಸಾವಿರ ರೂ.ಗಳಷ್ಟು ವಿನಾಯಕ ಸಾಲ ಮಾಡಿದ್ದನು. ವಿನಾಯಕ್ ಗಾರೆ ಕೆಲಸ ಮಾಡಿ ಜೀವನ ನಡೆಸುತ್ತಿದ್ದ ಕುಟುಂಬದವನಾಗಿದ್ದಾನೆ.

ಹಣವನ್ನು ಹಿಂತಿರುಗಿಸಲು ಕಾಲಾವಕಾಶ ಕೇಳಿದರೂ, ಕೇಳದೇ ಮಗುವನ್ನು ಅಪಹರಣ ಮಾಡಲಾಗಿದೆ. ಭದ್ರಾವತಿಗೆ ಬಂದು ಹಣವನ್ನು ಹಿಂತಿರುಗಿಸಿ ಮಗುವನ್ನು ತೆಗೆದುಕೊಂಡು ಹೋಗುವಂತೆ ಧಮ್ಕಿ ಹಾಕಲಾಗಿದೆ ಎಂದು ವಿನಾಯಕ್ ದಂಪತಿ ದೂರು ನೀಡಿದ್ದಾರೆ. ಸೂರ್ಯ ಸಿಟಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments