Webdunia - Bharat's app for daily news and videos

Install App

ಅಪಹರಿಸಿ, ನಗ್ನಗೊಳಿಸಿ ವೀಡಿಯೋ ಮಾಡಿ ಬ್ಲಾಕ್ ಮೇಲ್

Webdunia
ಭಾನುವಾರ, 18 ಸೆಪ್ಟಂಬರ್ 2022 (16:31 IST)
ಪೊಲೀಸರು ಎಂದು ಹೇಳಿಕೊಂಡು ಶ್ರೀಮಂತರನ್ನೇ ಅಹಪರಿಸುತ್ತಿದ್ದ ಖತರ್​​ನಾಕ್​ ಕಿಡ್ನ್ಯಾಪರ್ಸ್ ಕೊನೆಗೂ ಅಸಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಬಂಧನಕ್ಕೆ ಒಳಗಾಗಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ವಸಂತ ಶಿವರೆಡ್ಡಿ ಎಂಬವರನ್ನು ಅಪಹರಿಸಿದ್ದ ಆರೋಪಿಗಳು, 50 ಲಕ್ಷ ರೂ. ವಸೂಲಿ ಮಾಡಿದ್ದರು. ವಸಂತ, ಶಿವರೆಡ್ಡಿಗೆ ಹೈದರಾಬಾದ್​ಗೆ ಕಾರ್ಯನಿಮಿತ್ತ ಹೋಗಿದ್ದಾಗ ಅಲ್ಲಿನ ಹರೀಶ್ ಎಂಬಾತನ ಪರಿಚಯ‌ ಆಗಿತ್ತು. ಜಮೀನು ವಿಚಾರವಾಗಿ ಇವರು ಆರೋಪಿಯನ್ನು ಪರಿಚಯ ಮಾಡಿಕೊಂಡಿದ್ದರು.
 
ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ಹರೀಶ್, ಕಡಿಮೆ ದರದಲ್ಲಿ ಜಮೀನಿದೆ, ಅದರ ಬಗ್ಗೆ ಮಾತನಾಡಬೇಕು ಎಂಬುದಾಗಿ ಹೇಳಿ ವಸಂತ, ಶಿವರೆಡ್ಡಿ ಅವರನ್ನು ಕರೆಸಿಕೊಂಡಿದ್ದ. ದೇವನಹಳ್ಳಿ ಕಡೆಗೆ ಕರೆಸಿಕೊಂಡು, ನಂತರ ಹೈದರಾಬಾದ್ ಕಡೆಗೆ ಕರೆದೊಯ್ದು ಅಪಹರಣ ಮಾಡಿದ್ದರು.
 
ಅಪಹರಣದ ಬಳಿಕ ಶಿವರೆಡ್ಡಿಯನ್ನ ನಗ್ನಗೊಳಿಸಿ, ವಿಡಿಯೋ ಮಾಡಿ 50 ಲಕ್ಷ ರೂ. ಕೊಡುವಂತೆ ತಾಕೀತು ಮಾಡಿದ್ದರು. ಹಣ ತರುವಂತೆ ವಸಂತಳನ್ನ ಬೆಂಗಳೂರಿಗೆ ಕಳಿಸಿದ್ದರಿಂದ, ಆಕೆ ಸಾಲ ಮಾಡಿ ಹನ್ನೊಂದು ಲಕ್ಷ ರೂ. ಸಮೇತ ಹೈದರಾಬಾದ್​ಗೆ ಹೋಗಿ ಆರೋಪಿಗಳಿಗೆ ನೀಡಿದ್ದಳು. ನಂತರ ಅವರು ಇಬ್ಬರನ್ನೂ ಬಿಟ್ಟು ಕಳಿಸಿದ್ದರು. ಈ ಸಂಬಂಧ ಅವರು ಬ್ಯಾಟರಾಯನಪುರ ಠಾಣೆಗೆ ದೂರು ನೀಡಿದ್ದ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ.
 
ಹೈದರಾಬಾದ್​ನ ಜುಬಿಲಿ ಹಿಲ್ಸ್ ಕ್ಲಬ್ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳ ಬಳಿ ಪೊಲೀಸ್ ಎಂಬ ಕುರಿತು ನಕಲಿ ಐ.ಡಿ. ಕಾರ್ಡ್​​ಗಳು ಪತ್ತೆಯಾಗಿವೆ. ಆರೋಪಿಗಳಣು ಶಾಸಕ ಅಭ್ಯರ್ಥಿಯೊಬ್ಬರನ್ನೂ ಕಿಡ್ನಾಪ್‌ ಮಾಡಿದ್ದರೆನ್ನಲಾಗಿದ್ದು, ಅವರನ್ನು ತನಿಖೆಗೆ ಒಳಪಡಿಸಲಾಗುತ್ತಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

ಮುಂದಿನ ಸುದ್ದಿ