ಐಟಿ ಅಧಿಕಾರಿ ಪುತ್ರನನ್ನ ಅಪಹರಿಸಿ ಕೊಲೆ.. ಬೆಚ್ಚಿ ಬಿದ್ದ ಬೆಂಗಳೂರು

Webdunia
ಶುಕ್ರವಾರ, 22 ಸೆಪ್ಟಂಬರ್ 2017 (11:29 IST)
ಐಟಿ ಅಧಿಕಾರಿ ನಿರಂಜನ್ ಪುತ್ರ ಶರತ್ ಅಪಹರಣ ಪ್ರಕರಣ ದುರಂತ ಅಂತ್ಯ ಕಂಡಿದೆ.  ಶರತ್ ಅಪಹರಣದ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದರಿಂದ ಭಯಗೊಂಡ ಅಪಹರಣಕಾರರು ಆತನನ್ನ ಕೊಂದು ಹೂತಿಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.

ಶರತ್ ಅಕ್ಕನ ಸಹಪಾಠಿ ವಿಶಾಲ್ ಸಹಚರರ ಜೊತೆಸೇರಿ ಹಣಕ್ಕಾಗಿ ಸೆಪ್ಟೆಂಬರ್ 12ರಂದು ಶರತ್`ನನ್ನ ಅಪಹರಿಸಿ ಸ್ವಿಫ್ಟ್ ಕಾರಿನಲ್ಲಿ ಸುತ್ತಿಸಿದ್ದ. ವಾಟ್ಸಾಪ್ ವಿಡಿಯೋ ಮಾಡಿ ಮನೆಗೆ ಕಳುಹಿಸಿದ್ದ. ಹಣ ನೀಡದಿದ್ದರೆ ಇವರು ನನ್ನನ್ನ ಕೊಂದು ಬಿಡುತ್ತಾರೆ ಎಂದು ಶರತ್`ನಿಂದಲೇ ಹೇಳಿಸಿದ್ದ. ಬಳಿಕ ಪೊಲೀಸರಿಗೆ ಪೋಷಕರಿಗೆ ದೂರು ನೀಡಿದ್ದರು. ದೂರು ನೀಡಿದ ದಿನವೇ ದುಷ್ಕರ್ಮಿಗಳು ಶರತ್ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿದ್ದಾರೆಂದು ತಿಳಿದು ಬಂದಿದೆ.

ಕೊಲೆ ಮಾಡಿದ ಬಳಿಕ ಶವಕ್ಕೆ ಕಲ್ಲು ಕಟ್ಟಿ ರಾಮೋಹಳ್ಳಿ ಕೆರೆಗೆ ಹಾಕಿದ್ದರು. ಪ್ರತಿ ದಿನ ಶವ ತೇಲುತ್ತದೆಯೇ ಎಂದು ಪರೀಕ್ಷಿಸಲು ಕೆರೆಯ ಬಳಿಗೆ ಬಂದು ಹೋಗಿರುತ್ತಾರೆ. ಒಂದು ದಿನ ಶವ ತೇಲುತ್ತಿದ್ದದ್ದನ್ನ ಕಂಡು ಶವವನ್ನ ಮತ್ತೆ ಸ್ವಿಫ್ಟ್ ಕಾರಿನಲ್ಲಿ ಹಾಕಿಕೊಂಡು ಕೆರೆ ಪಕ್ಕದಲ್ಲಿ ಹೂತು ಹಾಕುತ್ತಾರೆ.ಕರೆಗಳ ಮಾಹಿತಿ ಆಧರಿಸಿದ ಪೊಲೀಸರು ವಿಸಾಲ್`ನನ್ನ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದೀಗ, ಪೊಲೀಸರು ಶವಕ್ಕಾಗಿ ಶೋಧ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments