Webdunia - Bharat's app for daily news and videos

Install App

ಉದ್ಯಮಿ ಕೆ.ಪಿ ನಂಜುಂಡಿ ವಿರುದ್ಧ ಅಪಹರಣ ಪ್ರಕರಣ ದಾಖಲು

Webdunia
ಗುರುವಾರ, 23 ಫೆಬ್ರವರಿ 2017 (11:16 IST)
ಪ್ರತಿಷ್ಠಿತ ಉದ್ಯಮಿ, ಲಕ್ಷ್ಮಿ ಗೋಲ್ಡ್ ಪ್ಯಾಲೇಸ್ ಮಾಲೀಕ ಕೆ.ಪಿ. ನಂಜುಂಡಿ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿದೆ.

ನಂಜುಂಡಿ ಅವರ ಲಕ್ಷ್ಮಿ ಗೋಲ್ಡ್ ಪ್ಯಾಲೇಸ್ ಮ್ಯಾನೇಜರ್ ಆಗಿರುವ ತಮ್ಮ ಪತಿ ವಿಜಯ್ ಕುಮಾರ್ ಅವರನ್ನು ಅಪಹರಿಸಿ ಅನ್ನ, ನೀರು ನೀಡದೆ ಮೈಸೂರಿನ ಮನೆಯೊಂದರಲ್ಲಿ ಮೂರು ದಿನ ಕೂಡಿ ಹಾಕಲಾಗಿತ್ತು. ಅವರ ಮೊಬೈಲ್‌ನ್ನು ಸಹ ಕಸಿದುಕೊಳ್ಳಲಾಗಿತ್ತು. ಮೈಸೂರು ಪೊಲೀಸರು ನನ್ನ ಪತಿಯನ್ನು ರಕ್ಷಿಸಿದ್ದಾರೆ, ಎಂದು ಬುಧವಾರ ವಿಜಯ್ ಕುಮಾರ್ ಪತ್ನಿ ಅಲಮೇಲು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
 
ಲಕ್ಷ್ಮಿ ಗೋಲ್ಡ್ ಪ್ಯಾಲೇಜ್‌ನಲ್ಲಿ ಉನ್ನತ ಸ್ಥಾನದಲ್ಲಿರುವ ರಾಜನ್ , ಪ್ಯಾಲೇಸ್‌ನ ಮೈಸೂರು ಬ್ರ್ಯಾಂಚ್‌ನಲ್ಲಿ ಕೆಲಸ ಮಾಡುತ್ತಿರುವ ರಾಮಕೃಷ್ಣ, ರಾಜು ಕಾರ್ಯ, ಮಾಲೀಕ ನಂಜುಂಡಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. 
 
ಪ್ರಕರಣದಲ್ಲಿ ನಂಜುಂಡಿ ಎರಡನೆಯ ಆರೋಪಿಯಾಗಿದ್ದು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
 
ತಮಗೆ ಕಂಪನಿಯಲ್ಲಿ ನಡೆಯುವ ಅವ್ಯವಹಾರದ ಬಗ್ಗೆ ಮಾಹಿತಿ ಇತ್ತು. ಹೀಗಾಗಿ ನನ್ನನ್ನು ಅಪಹರಿಸಿ ಕೂಡಿ ಹಾಕಲಾಗಿತ್ತು ಎಂದು ವಿಜಯ್ ಕುಮಾರ್ ಸಹ ಪೊಲೀಸರಲ್ಲಿ ದೂರಿದ್ದಾರೆ.
 
ಈ ಕುರಿತು ಪ್ರತಿಕ್ರಿಯಿಸಿರುವ ನಂಜುಂಡಿ ಆತನನ್ನು ಅಪಹರಿಸಲಾಗಿಲ್ಲ. ಚಿನ್ನ ಕಳ್ಳತನ, ಹಣ ದುರುಪಯೋಗ ಪಡಿಸಿಕೊಂಡ ಆರೋಪ ಹೊತ್ತಿರುವ ಆತ ವೃಥಾ ನಮ್ಮ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದಿದ್ದಾರೆ.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಪಿ.ನಂಜುಂಡಿ ಅವರ ಬಂಧನವಾಗುವ ಸಾಧ್ಯತೆಗಳು ಸಹ ಕಂಡು ಬರುತ್ತಿವೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments