Select Your Language

Notifications

webdunia
webdunia
webdunia
webdunia

ಹಣಕ್ಕಾಗಿ ಅಪಹರಣ: ಮೂವರು ಆರೋಪಿಗಳು ಅಂದರ್

ಹಣಕ್ಕಾಗಿ ಅಪಹರಣ: ಮೂವರು ಆರೋಪಿಗಳು ಅಂದರ್
ಬೆಂಗಳೂರು , ಬುಧವಾರ, 31 ಅಕ್ಟೋಬರ್ 2018 (14:58 IST)
ಹಣಕ್ಕಾಗಿ ವ್ಯಾಪಾರಿಯೊಬ್ಬನನ್ನು ಅಪಹರಿಸಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ ಆರೋಪಿಗಳಿಬ್ಬರನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ವ್ಯಾಪಾರಿ ಕೈಲಾಶ್ ಎಂಬುವರನ್ನು ಅಪಹರಣ ಮಾಡಿ 3 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದ ರೌಡಿ ಮಂಜುನಾಥ ಅಲಿಯಾಸ್ ಬಾಕ್ಸರ್ ಮಂಜ ಸೇರಿದಂತೆ ಇತರ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಜಯನಗರದ ಬಾಕ್ಸರ್ ಮಂಜ ಹಾಗೂ ರಾಮು ಬಂಧಿತ ಆರೋಪಿಗಳಾಗಿದ್ದಾರೆ. ಸಿಟಿ ಮಾರುಕಟ್ಟೆಯ ಮಾಲೂಲ್ ಪೇಟೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಈ ಇಬ್ಬರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ, ವ್ಯಾಪಾರಿ ಕೈಲಾಶ ಜೈನ್ ಅವರನ್ನು ಅಪಹರಿಸಿ ಹಣ ಬೇಡಿಕೆ ಇಟ್ಟಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಇಲಾಖೆ