ಪ್ರಿಯಕರನ ಜೊತೆ ಸೇರಿ ಮಾಜಿ ಪ್ರಿಯಕರನ ಕಿಡ್ನಾಪ್ : 21 ಲಕ್ಷ ರೂ. ದೋಚಿದ ಪ್ರಿಯತಮೆ!

Webdunia
ಸೋಮವಾರ, 26 ಜೂನ್ 2023 (11:47 IST)
ಚಿಕ್ಕಬಳ್ಳಾಪುರ : ಮಾಜಿ ಪ್ರಿಯಕರನನ್ನ ಹಾಲಿ ಪ್ರಿಯಕರನಿಂದ ಕಿಡ್ನಾಪ್ ಮಾಡಿಸಿ ಆತನ ಮೇಲೆ ಹಲ್ಲೆ ಮಾಡಿ 21 ಲಕ್ಷ ರೂ. ದೋಚಿರುವ ಘಟನೆ ನಂದಿಗಿರಿಧಾಮದಲ್ಲಿ ನಡೆದಿದೆ.

ಆಂಧ್ರದ ಅನಂತಪುರದ ವಿಜಯ್ ಸಿಂಗ್ ಎಂಬಾತ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ಈತ ಹಾಗೂ ಆಂಧ್ರದ ಪೊದ್ದಟೂರಿನ ಯುವತಿ ಕಳೆದ ಒಂದೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಕೆಲ ತಿಂಗಳಿಂದ ಇಬ್ಬರ ಮಧ್ಯೆ ಮನಸ್ತಾಪವಾಗಿ ದೂರ ಆಗಿದ್ದರು. 

ಜೂ.16 ರಂದು ಯುವತಿಯ ಮತ್ತೊಬ್ಬ ಪ್ರಿಯಕರ ಪುಲ್ಲಾರೆಡ್ಡಿ ಎಂಬಾತ ವಿಜಯ್ಸಿಂಗ್ಗೆ ಕರೆ ಮಾಡಿ ಪಾರ್ಟಿ ನೆಪದಲ್ಲಿ ಕರೆದಿದ್ದಾನೆ. ಬಳಿಕ ನಂದಿಬೆಟ್ಟದ ತಪ್ಪಲಿನ ಅಂಗಟ್ಟ ಗ್ರಾಮದ ಬಳಿಯ ಕ್ಯೂವಿಸಿ ವಿಲ್ಲಾಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಸಹಚರರಾದ ಸುಬ್ರಮಣಿ, ಸುಧೀರ್ ಜೊತೆ ಸೇರಿ ಪೆಪ್ಪರ್ ಸ್ಪ್ರೈ ಮುಖಕ್ಕೆ ಸಿಂಪಡಿಸಿ ಹಲ್ಲೆ ನಡೆಸಿದ್ದಾರೆ.

ಬೆಲ್ಟ್ ಹಾಗೂ ಹಗ್ಗದಿಂದ ಮನಸೋ ಇಚ್ಛೆ ಹಲ್ಲೆ ಮಾಡಿ ವೀಡಿಯೋ ಕಾಲ್ ಮೂಲಕ ಯುವತಿ ತೋರಿಸಿದ್ದಾಳೆ. ಮರುದಿನ ಮತ್ತೆ ಯುವತಿಯು ವಿಜಯ್ನನ್ನು ಭೇಟಿಯಾಗಿ ಅವಾಚ್ಯ ಪದಗಳಿಂದ ಬೈದಿದ್ದಾಳೆ. ಅಲ್ಲದೇ ಖಾತೆಯಲ್ಲಿದ್ದ 8 ಲಕ್ಷ ರೂ. ಸೇರಿ ಮತ್ತೆ 13 ಲಕ್ಷ ರೂ. ಆತನ ಮೊಬೈಲ್ ಮೂಲಕ ಅನ್ಲೈನ್ ಆ್ಯಪ್ಗಳಲ್ಲಿ ಲೋನ್ ಪಡೆದು ಬರೋಬ್ಬರಿ 21 ಲಕ್ಷ ರೂ.ಗಳನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments