Webdunia - Bharat's app for daily news and videos

Install App

ಪತ್ನಿಯ ಅಗಲಿಕೆ ನೋವು: ಮಗಳನ್ನು ಕೊಂದು ಆತ್ಮಹತ್ಯೆ

Webdunia
ಮಂಗಳವಾರ, 29 ಸೆಪ್ಟಂಬರ್ 2015 (12:57 IST)
ಪತ್ನಿಯ ಅಕಾಲಿಕ ಮರಣದಿಂದ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದ ವ್ಯಕ್ತಿಯೊಬ್ಬ ತನ್ನ 11 ತಿಂಗಳ ಹಸುಗೂಸನ್ನು ಉಸಿರುಗಟ್ಟಿಸಿ ಸಾಯಿಸಿ ತಾನು ಕೂಡ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಚೌಡೇಶ್ವರಿನಗರದಲ್ಲಿ ಸೋಮವಾರ ನಡೆದಿದೆ.

ಮೃತರನ್ನು ಗುರು (28)  ಮತ್ತು ಆತನ ಮಗಳು ರಿಷಿಕಾ ಎಂದು ಗುರುತಿಸಲಾಗಿದೆ.
 
ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಗುರು ಕಳೆದ 3 ವರ್ಷದ ಹಿಂದೆ ವಿಜಯಲಕ್ಷ್ಮೀ ಎಂಬಾಕೆಯನ್ನು ಮದುವೆಯಾಗಿದ್ದು ಮಾಗಡಿಯಲ್ಲಿ ವಾಸವಾಗಿದ್ದ. ಪತಿ ಪತ್ನಿ ಅನೋನ್ಯವಾಗಿದ್ದರು. ಮಗಳಿಗೆ ಜನ್ಮ ನೀಡಿದ ಬಳಿಕ ಹೊಟ್ಟೆನೋವಿನಿಂದ ಬಳಲುತ್ತಿದ್ದ ವಿಜಯಲಕ್ಷ್ಮೀ ಚಿಕಿತ್ಸೆ ಫಲಕಾರಿಯಾಗದೆ ಒಂದು ವರ್ಷದ ಹಿಂದೆ ಮೃತಪಟ್ಟಿದ್ದರು.
 
ಭಾನುವಾರ ಮಾಗಡಿಯಲ್ಲಿ ಪತ್ನಿಯ ತಿಥಿ ಕಾರ್ಯ ಮುಗಿಸಿ, ಮಗಳೊಂದಿಗೆ ಚೌಡೇಶ್ವರಿ ನಗರದಲ್ಲಿರುವ ಅಕ್ಕನ ಮನೆಗೆ ಬಂದ ಗುರು ಮಗಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ.  ಸೋಮವಾರ ಸಂಜೆ ಆತನ ಅಕ್ಕನ ಕುಟುಂಬದವರು ಮನೆಗೆ ಹಿಂತಿರುಗಿದಾಗ ಪ್ರಕರಣ ಬೆಳಕಿಗೆ ಬೆಳಕಿಗೆ ಬಂದಿದೆ. 
 
ಹಣದ ಕೊರತೆಯಿಂದ ಪತ್ನಿಗೆ ಸೂಕ್ತ ಚಿಕಿತ್ಸೆ ಕೊಡಿಸಲಾಗಲಿಲ್ಲ, ಆಕೆಯ ಸಾವಿಗೆ ತಾನೇ ಕಾರಣ ಎಂಬ ನೋವಿನಿಂದ ಗುರು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments