Select Your Language

Notifications

webdunia
webdunia
webdunia
webdunia

ಸಾವು ಗೌರಿ ಲಂಕೇಶ್ ರನ್ನು ಕಚೇರಿಯಿಂದಲೇ ಹಿಂಬಾಲಿಸಿತ್ತೇ?

ಸಾವು ಗೌರಿ ಲಂಕೇಶ್ ರನ್ನು ಕಚೇರಿಯಿಂದಲೇ ಹಿಂಬಾಲಿಸಿತ್ತೇ?
ಬೆಂಗಳೂರು , ಬುಧವಾರ, 6 ಸೆಪ್ಟಂಬರ್ 2017 (08:34 IST)
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಬಗ್ಗೆ ಇದೀಗ ಹಲವು ಅನುಮಾನಗಳು ಹುಟ್ಟಿಕೊಳ್ಳುತ್ತವೆ. ಒಂದು ಮೂಲದ ಪ್ರಕಾರ ಗೌರಿ ಲಂಕೇಶ್ ಹಂತಕರು ಆಕೆಯನ್ನು ಕಚೇರಿಯಿಂದಲೇ ಹಿಂಬಾಲಿಸಿಕೊಂಡು ಬಂದಿದ್ದರು.

 
ಓರ್ವ ಹಂತಕ ಮನೆಯ ಬಳಿ ಹೊಂಚು ಹಾಕಿದ್ದ. ಇನ್ನಿಬ್ಬರು ಗೌರಿ ಲಂಕೇಶ್ ತಮ್ಮ ಪತ್ರಿಕೆಯ ಸಂಚಿಕೆ ಕೆಲಸ ಮುಗಿಸಿ ಕಚೇರಿ ಬಾಗಿಲು ಮುಚ್ಚಿ ಮನೆಗೆ ಕಾರಿನಲ್ಲಿ ಮರಳುವಾಗ ಗಾಂಧಿಬಜಾರಿನಿಂದಲೇ ಹಿಂಬಾಲಿಸಿಕೊಂಡು ಬರುತ್ತಿದ್ದರು ಎನ್ನಲಾಗಿದೆ.

ತಮ್ಮನ್ನು ಯಾರೋ ಹಿಂಬಾಲಿಸುತ್ತಿರುವಂತೆ ಅನಿಸುತ್ತಿದೆ ಎಂದು ಗೌರಿ ತಮ್ಮ ಮನೆಯವರಿಗೆ ತಿಳಿಸಿದ್ದರು ಎಂದು ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಮನೆಯ ಬಳಿ ಹೊಂಚು ಹಾಕಿದ್ದ ಹಂತಕನಿಗೆ ಬೈಕ್ ನಲ್ಲಿ ಹಿಂಬಾಲಿಸುತ್ತಿದ್ದವರು ಮಾಹಿತಿ ನೀಡುತ್ತಿದ್ದಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಇದೀಗ ಈ ನಿಟ್ಟಿನಲ್ಲಿಯೂ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ.. ಗೌರಿ ಲಂಕೇಶ್ ಹತ್ಯೆ: ಸಿಸಿಟಿವಿಯಲ್ಲಿ ದಾಖಲಾಗಿದ್ದು ಏನು?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಗೌರಿ ಲಂಕೇಶ್ ಹತ್ಯೆ: ಸಿಸಿಟಿವಿಯಲ್ಲಿ ದಾಖಲಾಗಿದ್ದು ಏನು?