ವಕೀಲರ ವೇಷದಲ್ಲಿ ನ್ಯಾಯಾಲಯಕ್ಕೆ ಹಾಜರಾದ ಕೊಲೆ ಆರೋಪಿಗಳು!

Webdunia
ಸೋಮವಾರ, 5 ಜುಲೈ 2021 (18:14 IST)
ಬೆಳಗ್ಗೆ 37ನೇ ಎಸಿಎಂಎಂ ಕೋರ್ಟ್ ಆವರಣದಲ್ಲಿ ವಕೀಲರ ಸೋಗಿನಲ್ಲಿ ಏಳು ಮಂದಿ ಆರೋಪಿಗಳು ಪ್ರತ್ಯಕ್ಷರಾಗಿದ್ದಾರೆ. ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಕೋರ್ಟ್ ಪ್ರವೇಶಕ್ಕೆ ಅನುಮತಿ ನಿರಾಕರಣೆ ಮಾಡಿದ್ದು ಆರೋಪಿಗಳಾದ ಮಹೇಶ್, ನವೀನ್, ಪ್ರದೀಪ್, ಚಂದ್ರಶೇಖರ್, ಮನೋಜ್, ಚಂದ್ರಶೇಖರ್ ಹಾಗೂ ಪ್ರಸಾದ್ ಎಂಬುವರನ್ನು ಜಯನಗರ‌ ಪೊಲೀಸರು ಬಂಧಿಸಿದ್ದರು.
ಜುಲೈ 2 ರಂದು ಬನಶಂಕರಿ ಮೆಟ್ರೋ ಸ್ಟೇಷನ್ ಬಳಿ ಫೈನಾನ್ಸಿಯರ್ ಆಗಿದ್ದ ಲಕ್ಕಸಂದ್ರ ನಿವಾಸಿ‌ ಮದನ್​ನನ್ನು ಹಿಂಬಾಲಿಸಿ ಮೂರು ಬೈಕ್​ನಲ್ಲಿ ಬಂದು ಆರೋಪಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು.‌ ಹತ್ಯೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕಳೆದ ಎರಡು ವರ್ಷಗಳ ಹಿಂದೆ ಚನ್ನರಾಯಪಟ್ಟಣದ ರೌಡಿಶೀಟರ್​ ಲಿಂಗನ ಕೊಲೆಗೆ‌ ಮದನ್ ಫೈನಾನ್ಸ್ ಮಾಡಿದ್ದ ಎನ್ನಲಾಗುತ್ತಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾರೆ ಎಂಬ ಅಂಶ‌ ಪ್ರಾಥಮಿಕ ತನಿಖೆ ವೇಳೆ ತಿಳಿದುಬಂದಿದೆ.
ಕೊಲೆ‌ ಮಾಡಿ ಪೊಲೀಸರಿಗೆ ಸುಳಿವು ಸಿಗದಂತೆ ತಲೆಮರೆಸಿಕೊಂಡಿದ್ದ ಆರೋಪಿಗಳು ಇಂದು ಬೆಳಗ್ಗೆ ಕೋರ್ಟ್ ಮುಂದೆ ವಕೀಲರ ವೇಷದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಪೊಲೀಸರ ಗುಂಡೇಟಿನಿಂದ ತಪ್ಪಿಸಿಕೊಳ್ಳಲು‌ ಈ ಪ್ಲ್ಯಾನ್ ಮಾಡಿಕೊಂಡಿದ್ದರಾ? ಎಂಬ ಅನುಮಾನ ವ್ಯಕ್ತವಾಗಿದೆ. ಕೋವಿಡ್ ನಿಯಮ‌ ಪ್ರಕಾರ ಆರೋಪಿಗಳಿಗೆ ನ್ಯಾಯಾಲಯ ಪ್ರವೇಶ ನಿರಾಕರಣೆ ಹಿನ್ನೆಲೆಯಲ್ಲಿ‌ ಜಯನಗರ ಪೊಲೀಸರು ಸ್ಥಳದಲ್ಲೇ ಬಂಧಿಸಿ ಹೆಚ್ಚಿನ ವಿಚಾರಣೆಗೆ‌ ಒಳಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಗೆ ಡೊನೇಷನ್ ಎಲ್ಲಿಂದ ಎಂದ ಪ್ರಿಯಾಂಕ್ ಖರ್ಗೆ: ರಾಜಕೀಯ ಪಕ್ಷಗಳಿಗೆ ಎಲ್ಲಿಂದ ಎಂದ ಪಬ್ಲಿಕ್

Karnataka Weather: ಮಳೆ ಮುಗಿದೇ ಹೋಯ್ತು ಎಂದುಕೊಳ್ಳಬೇಡಿ, ಈ ಎಚ್ಚರಿಕೆ ಗಮನಿಸಿ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments