Webdunia - Bharat's app for daily news and videos

Install App

ಓರ್ವ ಭಯೋತ್ಪಾದಕನ ಹತ್ಯೆ

Webdunia
ಶುಕ್ರವಾರ, 11 ನವೆಂಬರ್ 2022 (18:09 IST)
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​​ನಲ್ಲಿ ಭಾರತೀಯ ಸೇನಾಪಡೆ ಎನ್ ಕೌಂಟರ್ ನಡೆಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. ಶೋಪಿಯಾನ್​​​ನ ಕಾಪ್ರೆನ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದೆ ಸೇನಾಪಡೆ ಎನ್ ಕೌಂಟರ್ ಆರಂಭಿಸಿ ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. ಹತ್ಯೆಯಾದ ಉಗ್ರನನ್ನು ಕಮ್ರನ್ ಬಾಯ್ ಅಲಿಯಾಸ್ ಅನೀಸ್ ಎಂದು ಗುರ್ತಿಸಲಾಗಿದೆ. ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments