Webdunia - Bharat's app for daily news and videos

Install App

ಪ್ರೀತಿಸಿದ ವಿಚಾರಕ್ಕಾಗಿ ದ್ವೇಷ ಸಾಧಿಸಿ ಯುವಕನ ಹತ್ಯೆ

Webdunia
ಸೋಮವಾರ, 18 ಜುಲೈ 2022 (17:53 IST)
ಪ್ರೀತಿಸಿದ ವಿಚಾರಕ್ಕಾಗಿ ದ್ವೇಷ ಸಾಧಿಸಿ ಯುವಕನನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಸಂಬಂಧಿ ಸೇರಿ ಇಬ್ಬರನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಾಗೇಂದ್ರ ಮತ್ತು ರಂಗಸ್ವಾಮಿ ಎಂದು ಗುರುತಿಸಲಾಗಿದೆ. ಮತ್ತಿಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
 
ಪ್ರೀತಿಸಿದ ಕಾರಣಕ್ಕೆ ಯುವಕನ ಕೊಲೆ :ಬಾಲಕಿಯ ಚಿಕ್ಕಪ್ಪ ಸೇರಿ ಇಬ್ಬರ ಬಂಧನಜುಲೈ 15 ರಂದು ಹಳೆ ಮದ್ರಾಸ್ ರಸ್ತೆಯ ನಿರ್ಜನ‌ ಪ್ರದೇಶದಲ್ಲಿ ಪ್ರಜ್ವಲ್ ಎಂಬಾತನ ಕೊಲೆ‌‌ ನಡೆದಿತ್ತು. ಕೊಲೆ ಮಾಡಿದ ಆರೋಪಿಗಳು ಬಳಿಕ ತಲೆಮರೆಸಿಕೊಂಡಿದ್ದರು.‌ಹತ್ಯೆಗೆ ಕಾರಣವಾಗಿದ್ದು ಮೆಸೇಜ್ : ಮೃತ ಪ್ರಜ್ವಲ್ ಗೆ ಆರೋಪಿ ನಾಗೇಂದ್ರ ಸಂಬಂಧಿಕನಾಗಿದ್ದಾನೆ. ಈ ನಾಗೇಂದ್ರನ ಅಣ್ಣನ ಅಪ್ರಾಪ್ತ ಮಗಳನ್ನು ಪ್ರಜ್ವಲ್ ಪ್ರೀತಿಸುತ್ತಿದ್ದ. ಜೊತೆಗೆ ಆಕೆಗೆ ಲವ್ ಯೂ ಎಂದು ಮೆಸೇಜ್ ಕಳುಹಿಸಿದ್ದ. ಇದಕ್ಕೆ ಪ್ರತಿಯಾಗಿ ಆಕೆಯೂ ಲವ್ ಯೂ ಟೂ ಎಂದು ಮೆಸೇಜ್ ಕಳುಹಿದ್ದಳು.
 
ಈ ಬಗ್ಗೆ ತಿಳಿದ ಬಾಲಕಿಯ ಚಿಕ್ಕಪ್ಪ ನಾಗೇಂದ್ರ ಜುಲೈ 15ರ ರಾತ್ರಿ ಪ್ರಜ್ವಲ್ ನ ಗೆಳೆಯನ ಮೂಲಕ ಪ್ರಜ್ವಲ್ ನನ್ನು ಹಳೇ ಮದ್ರಾಸ್ ರಸ್ತೆಯ ನಿರ್ಜನ ಪ್ರದೇಶಕ್ಕೆ ಕರೆಸಿದ್ದಾನೆ. ಈ ವೇಳೆ, ಜೊತೆಗಿದ್ದ ರಂಗಸ್ವಾಮಿ ಹಾಗೂ ನಾಗೇಂದ್ರ ಸೇರಿ ಪ್ರಜ್ವಲ್ ಹಾಗೂ ಆತನನ್ನು ಕರೆದುಕೊಂಡು ಬಂದ ಇಬ್ಬರಿಗೂ ದೊಣ್ಣೆಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ‌.
 
ತೀವ್ರವಾಗಿ ಗಾಯಗೊಂಡ ಪ್ರಜ್ವಲ್ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ‌. ಪ್ರಕರಣದ ಆರೋಪಿ ನಾಗೇಂದ್ರನ ಮೇಲೆ ಈ ಹಿಂದೆ ಕೊಲೆಯತ್ನ‌ ಪ್ರಕರಣದಲ್ಲಿ ಆರೋಪಿಯಾಗಿದ್ದ. ಈ ಕೃತ್ಯದಲ್ಲಿ ಇನ್ನಿಬ್ಬರು ಭಾಗಿಯಾಗಿದ್ದು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೂರ್ವ ವಿಭಾಗದ ಡಿಸಿಪಿ ಡಾ.ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments