Webdunia - Bharat's app for daily news and videos

Install App

ಕನ್ನಡಪರ ಸಂಘಟನೆ ತಾಲೂಕು ಅಧ್ಯಕ್ಷನ ಹತ್ಯೆ

Webdunia
ಭಾನುವಾರ, 8 ಜನವರಿ 2023 (18:31 IST)
ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಈ ಘಟನೆ ದಾವಣಗೆರೆಯ ಜಗಳೂರು ತಾಲೂಕಿನ ಹೊಸಕೆರೆ ಡಾಬಾ ಬಳಿ ತಡರಾತ್ರಿ ನಡೆದಿದೆ. ಗೌರಿಪುರ ಗ್ರಾಮದ ರಾಮಕೃಷ್ಣ ಮೃತಪಟ್ಟಿರುವ ಕನ್ನಡಪರ ಹೋರಾಟಗಾರ. ಅರ್ಜುನ್ ಮತ್ತು ಪ್ರಶಾಂತ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಗಳೂರು ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ತಾಲೂಧ್ಯಕ್ಷರಾಗಿದ್ದ ರಾಮಕೃಷ್ಣ, ಇತ್ತೀಚೆಗೆ ಗ್ರಾಮ ಪಂಚಾಯತಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ದೂರು ನೀಡಿದ್ದರು. ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌ ಕೊಲೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಕೊಲೆಯಾದ ಕನ್ನಡ ಪರ ಹೋರಾಟಗಾರ ರಾಮಕೃಷ್ಣನನ್ನು ಆರೋಪಿಗಳಾದ ಅರ್ಜುನ್ ಮತ್ತು ಪ್ರಶಾಂತ್​ ಪಾರ್ಟಿ ಮಾಡಲು ಹೊಸಕೆರೆ ಡಾಬಾಕ್ಕೆ ಕರೆಯಿಸಿಕೊಂಡಿದ್ದಾರೆ. ಮದ್ಯದ ನಶೆಯಲ್ಲಿದ್ದ ಸ್ನೇಹಿತರ ನಡುವೆ ವಾಗ್ವಾದ ಉಂಟಾಗಿದೆ. ಆ ಬಳಿಕ ಗಲಾಟೆ ಕೋಪಕ್ಕೆ ತಿರುಗಿದೆ. ಈ ವೇಳೆ ಆರೋಪಿಗಳು ಕಬ್ಬಿಣದ ರಾಡ್ ಹಾಗೂ ಕಲ್ಲುಗಳಿಂದ‌ ಜಜ್ಜಿ ಡಾಬಾದಲ್ಲಿಯೇ ಹತ್ಯೆ ಮಾಡಿದ್ದಾರೆ. ಕೊಲೆ ಮಾಡಲು ಆರೋಪಿಗಳು ಪೂರ್ವನಿಯೋಜಿತರಾಗಿಯೇ ಬಂದಿದ್ದರು ಎಂಬ ಶಂಕೆಯನ್ನು ಪೊಲೀಸ್ ಮೂಲಗಳು ವ್ಯಕ್ತಪಡಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments