Webdunia - Bharat's app for daily news and videos

Install App

ಕನ್ನಡಪರ ಸಂಘಟನೆ ತಾಲೂಕು ಅಧ್ಯಕ್ಷನ ಹತ್ಯೆ

Webdunia
ಭಾನುವಾರ, 8 ಜನವರಿ 2023 (18:31 IST)
ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಈ ಘಟನೆ ದಾವಣಗೆರೆಯ ಜಗಳೂರು ತಾಲೂಕಿನ ಹೊಸಕೆರೆ ಡಾಬಾ ಬಳಿ ತಡರಾತ್ರಿ ನಡೆದಿದೆ. ಗೌರಿಪುರ ಗ್ರಾಮದ ರಾಮಕೃಷ್ಣ ಮೃತಪಟ್ಟಿರುವ ಕನ್ನಡಪರ ಹೋರಾಟಗಾರ. ಅರ್ಜುನ್ ಮತ್ತು ಪ್ರಶಾಂತ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಗಳೂರು ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ತಾಲೂಧ್ಯಕ್ಷರಾಗಿದ್ದ ರಾಮಕೃಷ್ಣ, ಇತ್ತೀಚೆಗೆ ಗ್ರಾಮ ಪಂಚಾಯತಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ದೂರು ನೀಡಿದ್ದರು. ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌ ಕೊಲೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಕೊಲೆಯಾದ ಕನ್ನಡ ಪರ ಹೋರಾಟಗಾರ ರಾಮಕೃಷ್ಣನನ್ನು ಆರೋಪಿಗಳಾದ ಅರ್ಜುನ್ ಮತ್ತು ಪ್ರಶಾಂತ್​ ಪಾರ್ಟಿ ಮಾಡಲು ಹೊಸಕೆರೆ ಡಾಬಾಕ್ಕೆ ಕರೆಯಿಸಿಕೊಂಡಿದ್ದಾರೆ. ಮದ್ಯದ ನಶೆಯಲ್ಲಿದ್ದ ಸ್ನೇಹಿತರ ನಡುವೆ ವಾಗ್ವಾದ ಉಂಟಾಗಿದೆ. ಆ ಬಳಿಕ ಗಲಾಟೆ ಕೋಪಕ್ಕೆ ತಿರುಗಿದೆ. ಈ ವೇಳೆ ಆರೋಪಿಗಳು ಕಬ್ಬಿಣದ ರಾಡ್ ಹಾಗೂ ಕಲ್ಲುಗಳಿಂದ‌ ಜಜ್ಜಿ ಡಾಬಾದಲ್ಲಿಯೇ ಹತ್ಯೆ ಮಾಡಿದ್ದಾರೆ. ಕೊಲೆ ಮಾಡಲು ಆರೋಪಿಗಳು ಪೂರ್ವನಿಯೋಜಿತರಾಗಿಯೇ ಬಂದಿದ್ದರು ಎಂಬ ಶಂಕೆಯನ್ನು ಪೊಲೀಸ್ ಮೂಲಗಳು ವ್ಯಕ್ತಪಡಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

ಮುಂದಿನ ಸುದ್ದಿ
Show comments