ಮೂರು ದಿನಗಳಿಂದ ಠಿಕಾಣಿ ಹೂಡಿದ್ದ ಕಾಳಿಂಗ ಸರ್ಪ ಅರಣ್ಯ ಸೇರಿತು…!

Webdunia
ಶುಕ್ರವಾರ, 3 ಆಗಸ್ಟ್ 2018 (17:51 IST)
ಮೂರು ದಿನಗಳಿಂದ ಎಲ್ಲೂ ಹೋಗದೆ ಒಂದೇ ಜಾಗದಲ್ಲಿದ್ದ ಬೃಹತ್ ಕಾಳಿಂಗ ಸರ್ಪವನ್ನ ರಕ್ಷಿಸಿ ಅರಣ್ಯಕ್ಕೆ ಬಿಟ್ಟಿರೋ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಮರಕೋಡು ಗ್ರಾಮದಲ್ಲಿ ನಡೆದಿದೆ. ಮರಕೋಡುವಿನ ಅರುಣ್ ಎಂಬುವರ ಕಾಫಿ ತೋಟದಲ್ಲಿದ್ದ ಈ ಕಾಳಿಂಗನನ್ನ ಮೂರು ದಿನಗಳ ಹಿಂದೆಯೇ ಕೆಲಸಗಾರರೂ ನೋಡಿದ್ರು. ಕಾಫಿ ತೋಟದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರು ತೋಟದಲ್ಲಿ ಹತ್ತಾರು ಹಾವುಗಳನ್ನ ನೋಡಿರ್ತಾರೆ. ಆದ್ರೆ, ಹಾವುಗಳು ಒಂದೇ ಜಾಗದಲ್ಲಿ ಇರೋದಿಲ್ಲ ಎಂದು ಸುಮ್ಮನಾಗಿದ್ರು. ಆದ್ರೆ, ಈ ಕಾಳಿಂಗ ಮೂರು ದಿನಗಳಿಂದ ಒಂದೇ ಜಾಗದಲ್ಲೇ ಓಡಾಡಿಕೊಂಡು ಇದ್ದಿದ್ರಿಂದ ಕೂಲಿ ಕಾರ್ಮಿಕರು ತೋಟದ ಮಾಲೀಕನಿಗೆ ವಿಷಯ ಮುಟ್ಟಿಸಿದ್ದಾರೆ. ತೋಟದ ಮಾಲೀಕ ಅರುಣ್ ಶೃಂಗೇರಿಯ ಉರಗತಜ್ಞ ಅರ್ಜುನ್‍ರನ್ನ ಸ್ಥಳಕ್ಕೆ ಕರೆಸಿ ಈ ಬೃಹತ್ ಕಾಳಿಂಗನನ್ನ ಸೆರೆ ಹಿಡಿಸಿದ್ದಾರೆ.

ದೈತ್ಯಾಕಾರದ ಕಾಳಿಂಗನನ್ನ ಹಿಡಿದ್ದನ್ನು ಕಂಡ ಸ್ಥಳೀಯರು ಹಾಗೂ ಕೂಲಿ ಕಾರ್ಮಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಹಾವನ್ನ ಸೆರೆ ಹಿಡಿದ ಅರ್ಜುನ್ ಕೆರೆಕಟ್ಟೆ ಅರಣ್ಯಕ್ಕೆ ಬಿಟ್ಟಿದ್ದಾರೆ. ಅರಣ್ಯ ಬಿಡುವ ಮುನ್ನ ನದಿ ದಡದಲ್ಲಿ ಕಾಳಿಂಗನನ್ನ ಸ್ವಲ್ಪ ಆಟವಾಡಿಸಿದ್ದಾರೆ. ಈ ವೇಳೆ ನೋಡೋದಕ್ಕೆ ಭಯವಾಗುವಂತಹ ಬೃಹತ್ ಕಾಳಿಂಗ ಹೆಡೆ ಎತ್ತಿದಾಗ ಅರ್ಜುನ್ ಅದರ ತಲೆ ಸವರಿರೋದನ್ನು ಕಂಡ ಸ್ಥಳೀಯರು ಅರ್ಜುನ್ ಧೈರ್ಯಕ್ಕೆ ಶಹಬ್ಬಾಸ್ ಅಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶೇಷ ದಿನದಂದು ಕನ್ನಡ ಭಕ್ತಿಗೀತೆ ಹಂಚಿಕೊಂಡ ನರೇಂದ್ರ ಮೋದಿ

ದಾರಿ ವಿಚಾರವಾಗಿ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ, ಆರೋಪಿ ಅರೆಸ್ಟ್‌

ಕೇರಳ: ಡಾ ವಂದನಾ ದಾಸ್ ಕೊಲೆ ಪ್ರಕರಣ, ಆರೋಪಿಗೆ ಜೀವಾವಧಿ ಶಿಕ್ಷೆ

ಈದ್ ಮಿಲಾದ್ ದಿನವೇ ಇರಾನ್‌ ಅಧ್ಯಕ್ಷನ ಜತೆ ದಿಢೀರ್ ಮಾತುಕತೆ ನಡೆದ ಪ್ರಧಾನಿ ನರೇಂದ್ರ ಮೋದಿ

ಮಥುರಾದ ದಂಘಾಟಿ ದೇವಸ್ಥಾನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಮುಂದಿನ ಸುದ್ದಿ
Show comments