ಮೈಸೂರಿನಿಂದ ಯದುವೀರ ಒಡೆಯರ್ ಬಿಜೆಪಿ ಅಭ್ಯರ್ಥಿ: ಪ್ರತಾಪ್ ಸಿಂಹಗೆ ಟಿಕೆಟ್ ಡೌಟ್

Krishnaveni K
ಶನಿವಾರ, 9 ಮಾರ್ಚ್ 2024 (11:04 IST)
Photo Courtesy: Twitter
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ಬಿಜೆಪಿ ಕೆಲವು ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತಂತ್ರ ರೂಪಿಸಿದೆ. ಈಗಾಗಲೇ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಹೆಸರು ಕೇಳಿಬರುತ್ತಿದೆ. ಇದರ ಜೊತೆಗೆ ಈಗ ಮೈಸೂರು ಒಡೆಯರ್ ಯದುವೀರ್ ಹೆಸರೂ ಚಾಲ್ತಿಗೆ ಬಂದಿದೆ.

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಯೋಜನೆ ರೂಪಿಸಿದೆ. ಇದಕ್ಕಾಗಿ ಯದುವೀರ್ ಜೊತೆ ಮಾತುಕತೆಯನ್ನೂ ನಡೆಸುತ್ತಿದೆ ಎನ್ನಲಾಗಿದೆ. ಈಗಾಗಲೇ ಹಲವು ಬಾರಿ ಯದುವೀರ್ ಒಡೆಯರ್ ಅವರನ್ನು ಪ್ರಧಾನಿ ಮೋದಿಯವರನ್ನು ಹೊಗಳಿ ಮಾತನಾಡಿದ್ದು ಇದೆ. ಇತ್ತೀಚೆಗೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು.

ಹೀಗಾಗಿ ಬಿಜೆಪಿ ಪರ ನಿಲುವು ಹೊಂದಿರುವ ಅವರಿಗೆ ಮೈಸೂರು ಟಿಕೆಟ್ ನೀಡಲು ಬಿಜೆಪಿ ಪ್ಲ್ಯಾನ್ ಮಾಡಿದೆ. ಆದರೆ ಇದಕ್ಕೆ ಯದುವೀರ್ ಒಡೆಯರ್ ಒಪ್ಪುತ್ತಾರಾ ಕಾದು ನೋಡಬೇಕು. ಇಷ್ಟು ದಿನ ರಾಜಕೀಯದಲ್ಲಿರದ ಯದುವೀರ್ ಈಗ ಒಂದು ಪಕ್ಷದ ಜೊತೆ ಅಧಿಕೃತವಾಗಿ ಗುರುತಿಸಿಕೊಳ್ಳುತ್ತಾರಾ ಎನ್ನುವುದು ಅನುಮಾನ.

ಒಂದು ವೇಳೆ ಯದುವೀರ್ ರನ್ನು ಕಣಕ್ಕಿಳಿಸಿದರೆ ಹಾಲಿ ಸಂಸದ ಪ್ರತಾಪ್ ಸಿಂಹಗೆ ಮೈಸೂರು ಟಿಕೆಟ್ ಕೈ ತಪ್ಪಿ ಹೋಗಲಿದೆ. ಮೈಸೂರು-ಬೆಂಗಳೂರು ಹೆದ್ದಾರಿ ನಿರ್ಮಾಣಕ್ಕೆ ಶ್ರಮಿಸಿ ಒಳ್ಳೆಯ ಹೆಸರು ಮಾಡಿಕೊಂಡಿದ್ದರೂ ಸಂಸತ್ ಮೇಲೆ ದಾಳಿ ಪ್ರಕರಣದಲ್ಲಿ ಪ್ರತಾಪ್ ಸಿಂಹ ಆಪ್ತರೇ ಆರೋಪಿಗೆ ಟಿಕೆಟ್ ನೀಡಿರುವ ಆರೋಪ ಕೇಳಿಬಂದಿತ್ತು.  ಹೀಗಾಗಿ ಪ್ರತಾಪ್ ಸಿಂಹಗೆ ಈ ಬಾರಿಗೆ ಮೈಸೂರು ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments