Webdunia - Bharat's app for daily news and videos

Install App

ಮೈಸೂರಿನಿಂದ ಯದುವೀರ ಒಡೆಯರ್ ಬಿಜೆಪಿ ಅಭ್ಯರ್ಥಿ: ಪ್ರತಾಪ್ ಸಿಂಹಗೆ ಟಿಕೆಟ್ ಡೌಟ್

Krishnaveni K
ಶನಿವಾರ, 9 ಮಾರ್ಚ್ 2024 (11:04 IST)
Photo Courtesy: Twitter
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ಬಿಜೆಪಿ ಕೆಲವು ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತಂತ್ರ ರೂಪಿಸಿದೆ. ಈಗಾಗಲೇ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಹೆಸರು ಕೇಳಿಬರುತ್ತಿದೆ. ಇದರ ಜೊತೆಗೆ ಈಗ ಮೈಸೂರು ಒಡೆಯರ್ ಯದುವೀರ್ ಹೆಸರೂ ಚಾಲ್ತಿಗೆ ಬಂದಿದೆ.

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಯೋಜನೆ ರೂಪಿಸಿದೆ. ಇದಕ್ಕಾಗಿ ಯದುವೀರ್ ಜೊತೆ ಮಾತುಕತೆಯನ್ನೂ ನಡೆಸುತ್ತಿದೆ ಎನ್ನಲಾಗಿದೆ. ಈಗಾಗಲೇ ಹಲವು ಬಾರಿ ಯದುವೀರ್ ಒಡೆಯರ್ ಅವರನ್ನು ಪ್ರಧಾನಿ ಮೋದಿಯವರನ್ನು ಹೊಗಳಿ ಮಾತನಾಡಿದ್ದು ಇದೆ. ಇತ್ತೀಚೆಗೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು.

ಹೀಗಾಗಿ ಬಿಜೆಪಿ ಪರ ನಿಲುವು ಹೊಂದಿರುವ ಅವರಿಗೆ ಮೈಸೂರು ಟಿಕೆಟ್ ನೀಡಲು ಬಿಜೆಪಿ ಪ್ಲ್ಯಾನ್ ಮಾಡಿದೆ. ಆದರೆ ಇದಕ್ಕೆ ಯದುವೀರ್ ಒಡೆಯರ್ ಒಪ್ಪುತ್ತಾರಾ ಕಾದು ನೋಡಬೇಕು. ಇಷ್ಟು ದಿನ ರಾಜಕೀಯದಲ್ಲಿರದ ಯದುವೀರ್ ಈಗ ಒಂದು ಪಕ್ಷದ ಜೊತೆ ಅಧಿಕೃತವಾಗಿ ಗುರುತಿಸಿಕೊಳ್ಳುತ್ತಾರಾ ಎನ್ನುವುದು ಅನುಮಾನ.

ಒಂದು ವೇಳೆ ಯದುವೀರ್ ರನ್ನು ಕಣಕ್ಕಿಳಿಸಿದರೆ ಹಾಲಿ ಸಂಸದ ಪ್ರತಾಪ್ ಸಿಂಹಗೆ ಮೈಸೂರು ಟಿಕೆಟ್ ಕೈ ತಪ್ಪಿ ಹೋಗಲಿದೆ. ಮೈಸೂರು-ಬೆಂಗಳೂರು ಹೆದ್ದಾರಿ ನಿರ್ಮಾಣಕ್ಕೆ ಶ್ರಮಿಸಿ ಒಳ್ಳೆಯ ಹೆಸರು ಮಾಡಿಕೊಂಡಿದ್ದರೂ ಸಂಸತ್ ಮೇಲೆ ದಾಳಿ ಪ್ರಕರಣದಲ್ಲಿ ಪ್ರತಾಪ್ ಸಿಂಹ ಆಪ್ತರೇ ಆರೋಪಿಗೆ ಟಿಕೆಟ್ ನೀಡಿರುವ ಆರೋಪ ಕೇಳಿಬಂದಿತ್ತು.  ಹೀಗಾಗಿ ಪ್ರತಾಪ್ ಸಿಂಹಗೆ ಈ ಬಾರಿಗೆ ಮೈಸೂರು ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments