Webdunia - Bharat's app for daily news and videos

Install App

ಬಾಡಿಗೆ ವಿಚಾರವಾಗಿ ವಿದೇಶಿ ಪ್ರಜೆಯೊಂದಿಗೆ ಕಿರಿಕ್

Webdunia
ಭಾನುವಾರ, 10 ಅಕ್ಟೋಬರ್ 2021 (17:17 IST)
ಬಾಡಿಗೆ ವಿಚಾರವಾಗಿ ವಿದೇಶಿ ಪ್ರಜೆಯೊಂದಿಗೆ ಕಿರಿಕ್ ಮಾಡಿಕೊಂಡು ಮೊಬೈಲ್ ಕಸಿದು ಪರಾರಿಯಾಗಿದ್ದ ಆಟೋಚಾಲಕನನ್ನ ಬೈಯ್ಯಪ್ಪನಹಳ್ಳಿ ಪೊಲೀಸ್ರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನ ಶರತ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 6 ರಂದು ಆಸ್ಟ್ರೇಲಿಯಾ ಪ್ರಜೆ ಗ್ರೇ ಜಾನ್ ನ್ಯೂಮನ್ ಎಂಬಾತ ಚರ್ಚ್ ಸ್ಟ್ರೀಟ್ ನಿಂದ ಸಿವಿ ರಾಮನ್ ನಗರಕ್ಕೆ ಆಟೋ ರಿಕ್ಷಾ ಬುಕ್ ಮಾಡಿದ್ರು. ಈ ವೇಳೆ ಸ್ಥಳಕ್ಕೆ ಬಂದ ಆಟೋ ಚಾಲಕ ಶರತ್ 200 ರೂಪಾಯಿ ಕೇಳಿದ್ದು, ಆಸ್ಟ್ರೇಲಿಯಾ ಪ್ರಜೆ ಗ್ರೇ ಜಾನ್ ನ್ಯೂಮನ್ ಸಹ ಒಪ್ಪಿಗೆ ಸೂಚಿಸಿದ್ದನಂತೆ. ಆದ್ರೆ, ಮಾರ್ಗ ಮಧ್ಯೆ ಹಲಸೂರು ಬಳಿ ಆಟೋ ಪಂಕ್ಚರ್ ಆಗಿದ್ದು, ಪಂಕ್ಚರ್ ಹಾಕಿಸಿದ ಬಳಿಕ ಗ್ರೇ ಜಾನ್ ನನ್ನ ಹೇಳಿದ ಕಡೆ ಡ್ರಾಪ್ ಮಾಡಲಾಗಿತ್ತು ಆದ್ರೆ, ಆ ವೇಳೆ ಆಸ್ಟ್ರೇಲಿಯಾ ಪ್ರಜೆ ಮಾತನಾಡಿದ್ದ 200 ರೂಪಾಯಿ ಜೊತೆಗೆ 100 ರೂಪಾಯಿ ಟಿಪ್ಸ್ ಸಹ ನೀಡಿದ್ದಾನೆ. ಆದ್ರೆ, ಅದಕ್ಕೆ ವಿರೋಧ ವ್ಯಕ್ತಪಡಿಸಿದ ಶರತ್ 300 ರೂ ಬದಲಿಗೆ 700 ರೂಪಾಯಿ ಡಿಮ್ಯಾಂಡ್ ಮಾಡಿದ್ದಾನೆ. ಅಷ್ಟು ಕೊಡಲು ಆಸ್ಟ್ರೇಲಿಯಾ ಪ್ರಜೆ ಒಪ್ಪದಿದ್ದಾಗ  ಆತನ ಮೇಲೆ ಹಲ್ಲೆ ನಡೆಸಿದ ಆಟೋ ಚಾಲಕ ಶರತ್ ಹಲ್ಲೆ ನಡೆಸಿ, ಮೊಬೈಲ್ ಕಸಿದು ಎಸ್ಕೇಪ್ ಆಗಿದ್ದ. ಈ ಸಂಬಂಧ ಗ್ರೇ ಜಾನ್ ನ್ಯೂಮನ್ ಬೈಯ್ಯಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸ್ರು ಆರೋಪಿಯನ್ನ ಬಂಧಿಸಿ,, ಕಸಿದು ಪರಾರಿಯಾಗಿದ್ದ ಮೊಬೈಲ್ ಫೋನ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments