KMCC ಆಂಬ್ಯುಲೆನ್ಸ್ ಚಾಲಕ ಹನೀಫ್ ಎಂಬಾತನು ಅನಾವಶ್ಯಕ ಜೀರೋ ಟ್ರಾಫಿಕ್

Webdunia
ಸೋಮವಾರ, 6 ಡಿಸೆಂಬರ್ 2021 (20:10 IST)
ಬೆಂಗಳೂರು KMCC ಆಂಬ್ಯುಲೆನ್ಸ್ ಸೇವೆಯ ಬಗ್ಗೆ 
ಹೆಮ್ಮೆ ಇದೆ....ಆದರೇ ಇತ್ತೀಚೆಗೆ ಈ ಸೇವೆಯನ್ನು ಈ ಆಂಬ್ಯುಲೆನ್ಸ್ ಚಾಲಕ ಹನೀಫ್ ಎಂಬಾತನು ಸ್ವಂತ  ಪ್ರಚಾರಕ್ಕಾಗಿ ದುರುಪಯೋಗ ಪಡಿಸಿಕೊಂಡಿರುದು   ದುರುದುಷ್ಟಕರ..ಈ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಆಯುಕ್ತರು ಗಮನಹರಿಸಬೇಕು.....
ಈ ಸಂಸ್ಥೆಯ ಆಂಬ್ಯುಲೆನ್ಸ್ ಒಂದು ರೋಗಿಯನ್ನು ಮಂಗಳೂರು ನಿಂದ ಬೆಂಗಳೂರು ಗೇ ಯಾವುದೇ ರೋಗಿಯನ್ನು ಕರೆದುಕೊಂಡು ಹೋಗಬೇಕಾದರೆ ಜೀರೋ ಟ್ರಾಫಿಕ್ ಮಾಡಿ ಈ ಆಂಬ್ಯುಲೆನ್ಸ್ ಚಾಲಕ ಹನೀಫ್ ಎಲ್ಲಾ ರೋಗಿಯನ್ನು ಕರೆದುಕೊಂಡು ಹೋಗುವುದು ಈತನಿಗೆ ಅಭ್ಯಾಸವಾಗಿ ಹೋಗಿದೆ... ರೋಗಿಯ ತುರ್ತು ಸಂದರ್ಭದಲ್ಲಿ ಜೀರೋ ಟ್ರಾಫಿಕ್ ನಲ್ಲಿ ಆಂಬ್ಯುಲೆನ್ಸ್ ಹೋಗುವುದಕ್ಕೆ ಯಾವುದೇ ತೊಂದರೆ ಇಲ್ಲ....ಕೆಲ ಸಮಯದಲ್ಲಿ ತುರ್ತು ಸಂದರ್ಭ ಇಲ್ಲದಿದ್ದರೂ KMCC ಆಂಬ್ಯುಲೆನ್ಸ್ ಚಾಲಕ ಹನೀಫ್ ಎಂಬಾತನು ಜೀರೋ ಟ್ರಾಫಿಕ್ ಮೂಲಕ ಈತನು ಹೋಗುವುದರ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು, ಆಯುಕ್ತರು ಈ ಬಗ್ಗೆ ಗಮನಹರಿಸಬೇಕು....
ಅಲ್ಲದೇ ಇದು ಸಾರ್ವಜನಿಕರಿಗೆ ಇದರಿಂದ ತೊಂದರೆ ಉಂಟು ಮಾಡುತ್ತದೆ..ಇಂದು ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆ‌ಯಾದ ಇಂಡಿಯಾನಾ ಆಸ್ಪತ್ರೆಯಿಂದ 10 ದಿನದ ಮಗುವನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಲು ಜೀರೋ ಟ್ರಾಫಿಕ್ ಅವಶ್ಯಕತೆ ಇತ್ತಾ ! ಸಾಧಾರಣವಾಗಿ ಯಾವ ರೀತಿ ಆಂಬ್ಯುಲೆನ್ಸ್ ರಸ್ತೆ ಮೂಲಕ ರೋಗಿಯನ್ನು ಸಾಗಿಸುತ್ತೂ ಅದೇ ರೋಗಿಯನ್ನು ಸಾಗಿಸಿದರೆ ಸಾಕಿತ್ತು..ಆದರೆ ಜೀರೋ ಟ್ರಾಫಿಕ್ ಮಾಡಿ ಹೋಗುವ ಅವಶ್ಯಕತೆ ಏನಿತ್ತು ? ಮಂಗಳೂರಿನಲ್ಲಿ ಅದೇಷ್ಟೋ ಆಂಬ್ಯುಲೆನ್ಸ್ ಗಳು ರೋಗಿಯನ್ನು ತುರ್ತು ಸಂದರ್ಭದಲ್ಲಿ ಬೇರೆ ಜಿಲ್ಲೆಗಳಿಗೆ ಕರೆದುಕೊಂಡು ಹೋಗುತ್ತದೆ ಜೀರೋ ಟ್ರಾಫಿಕ್ ಇಲ್ಲದೇ....ಅಲ್ಲದೇ ಈ ಬಗ್ಗೆ ಆಸ್ಪತ್ರೆಯ ಆಡಳಿತಾಧಿಕಾರಿ ಗಳ ಜೊತೆ ಕೇಳಿದಾಗ ಜೀರೋ ಟ್ರಾಫಿಕ್ ಮಾಡಿ ಹೋಗುವ ಅವಶ್ಯಕತೆ ಇರುವ ತುರ್ತು ಸಂದರ್ಭ ಅಲ್ಲ ...ಆ ಮಗುವಿಗೆ ಬೇಕಾಗುವ ಆ ಸೌಲಭ್ಯದ ಚಿಕಿತ್ಸೆ ಯು ಮಂಗಳೂರಿನ ಲ್ಲಿ ಇಲ್ಲದ ಕಾರಣ ಬೆಂಗಳೂರು ಗೇ ಹೋಗಲು ನಾವು ತಿಳಿಸಿದ್ದೇವೆ..ಇದು ಆಸ್ಪತ್ರೆಯ ಆಡಳಿತಾಧಿಕಾರಿ ಗಳ ಉತ್ತರ...KMCC ಆಂಬ್ಯುಲೆನ್ಸ್ ಚಾಲಕ ಹನೀಫ್ ಎಂಬಾತನು ಅದು ಹೇಗೆ ಜೀರೋ ಟ್ರಾಫಿಕ್ ಆಗಿ ರೋಗಿಯನ್ನು ಸಾಗಿಸಿದ ? ಈ ಬಗ್ಗೆ ಪೊಲೀಸ್ ಇಲಾಖೆ ಅನುಮತಿ ನೀಡಿದೆಯಾ ? ಅಥವಾ ಅನುಮತಿ ನೀಡುವಾಗ ಆಸ್ಪತ್ರೆಯ ವೈದ್ಯರು ಗಳ  ಜೂತೆ  ಪೊಲೀಸ್ ಇಲಾಖೆ ಮಾತುಕತೆ ಮಾಡಿದೆಯಾ ?
ಈತನ ಪ್ರಚಾರಕ್ಕಾಗಿ ಸಾರ್ವಜನಿಕರಿಗೆ ತೊಂದರೆ ಅಲ್ಲವೇ ? ಈ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಆಯುಕ್ತರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು...KMCC ಆಂಬ್ಯುಲೆನ್ಸ್ ಚಾಲಕ ಹನೀಫ್ ಎಂಬಾತನು ಈ ರೀತಿ ಪ್ರಚಾರಕ್ಕಾಗಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವುದನ್ನು ನಿಲ್ಲಿಸಬೇಕು....ಅಲ್ಲದೇ ಎಲ್ಲಾ ಸಂಘಟನೆ ಗಳು ಈ ಬಗ್ಗೆ ಗಮನಹರಿಸಬೇಕು ಎಂಬುದೇ ನಮ್ಮ ಕಾಳಜಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments