Webdunia - Bharat's app for daily news and videos

Install App

ನಂದಿನಿ ಹಾಲಿನ ದರ ಏರಿಕೆ: ಗುಡ್ ನ್ಯೂಸ್ ಕೊಟ್ಟ ಕೆಎಂಎಫ್ ಅಧ್ಯಕ್ಷ

Krishnaveni K
ಬುಧವಾರ, 4 ಡಿಸೆಂಬರ್ 2024 (15:06 IST)
ಬೆಂಗಳೂರು: ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗಲಿದೆ ಎಂಬ ಆತಂಕದಲ್ಲಿದ್ದ ಜನರಿಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಗುಡ್ ನ್ಯೂಸ್ ಒಂದನ್ನು ಕೊಟ್ಟಿದ್ದಾರೆ. ಸದ್ಯಕ್ಕೆ ಅಂತಹ ಪ್ರಸ್ತಾಪ ಇಲ್ಲ ಎಂದಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ರಾಮನಗರದಲ್ಲಿ ಮುಖ್ಯಮಂತ್ರಿಗಳು ನಂದಿನಿ ಹಾಲಿನ ದರ ಏರಿಕೆ ಮಾಡುವ ಬಗ್ಗೆ ಹೇಳಿದ್ದರು. ಆದರೆ ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಸದ್ಯಕ್ಕೆ ಪ್ರಸ್ತಾವನೆ ಇಲ್ಲ. ಆದರೆ ದರ ಏರಿಕೆ ಮಾಡಬೇಕೆಂದು ರೈತರ ಬೇಡಿಕೆಯಿದೆ. ಆದರೆ ಸದ್ಯಕ್ಕೆ ದರ ಏರಿಕೆ ಮಾಡುವ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾರೆ.

ಮೊನ್ನೆಯಷ್ಟೇ ಕೋಲಾರದಲ್ಲಿ ಶಾಸಕ ಕೆಪಿ ನಂಜೇಗೌಡ ನಂದಿನಿ ದರ ಏರಿಕೆ ಮಾಡುವ ಬಗ್ಗೆ ಹೇಳಿದ್ದರು. ಇದಕ್ಕೆ ಮೊದಲು ಸಿಎಂ ಸಿದ್ದರಾಮಯ್ಯ ಕೂಡಾ ರೈತರಿಗೆ ನೆರವಾಗುವ ಉದ್ದೇಶದಿಂದ ಅನಿವಾರ್ಯವಾಗಿ ಹಾಲಿನ ದರ ಏರಿಕೆ ಮಾಡಬೇಕಾಗುತ್ತದೆ ಎಂದಿದ್ದರು. ಆದರೆ ಈಗ ಕೆಎಂಎಫ್ ಅಧ್ಯಕ್ಷ ಸದ್ಯಕ್ಕೆ ಅಂತಹ ಪ್ರಸ್ತಾಪ ಇಲ್ಲ ಎಂದಿದ್ದಾರೆ.

ಈಗಾಗಲೇ ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ತತ್ತರಿಸಿದ್ದಾರೆ. ಇದರ ನಡುವೆ ಮತ್ತೊಮ್ಮೆ ಹಾಲಿನ ದರ ಏರಿಕೆ ಮಾಡಲು ಹೊರಟ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಈಗ ಕೆಎಂಎಫ್ ಅಧ್ಯಕ್ಷರ ಹೇಳಿಕೆ ಜನರಿಗೆ ಸ್ವಲ್ಪ ಮಟ್ಟಿಗೆ ನಿರಾಳತೆ ಮೂಡಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments