Webdunia - Bharat's app for daily news and videos

Install App

ಓಟ್ ಹಾಕದಿರೋದಕ್ಕೆ ಚಾಕು ಇರಿದ ಭೂಪ!

Webdunia
ಸೋಮವಾರ, 3 ಸೆಪ್ಟಂಬರ್ 2018 (18:32 IST)
ಮತ ಹಾಕದ್ದಕ್ಕೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್ ಅಭ್ಯರ್ಥಿಯ ಸಂಬಂಧಿ ಮಹಿಳೆಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ.

ಮತ ಹಾಕದ್ದಕ್ಕೆ  ಚಾಕು ಹಾಕಿದ ಭೂಪ!. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲುಂಡಿರುವ ಕಾಂಗ್ರೆಸ್ ಅಭ್ಯರ್ಥಿಯ ಮೈದುನನೊಬ್ಬ ಮಹಿಳೆಯೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ.
ಕೊಪ್ಪಳದ  19ನೇ ವಾರ್ಡಿನಲ್ಲಿ ಘಟನೆ ನಡೆದಿದೆ.

ರೆಹಮತ್ ಬೀ (65) ಮಹಿಳೆಗೆ ಚಾಕುವಿನಿಂದ  ಸೈಯದ್ ನಿಜಾಮುದ್ದೀನ್ ಹಾಗೂ ಸೈಯದ್ ಸಿರಾಜುದ್ದೀನ್ ಹುಸೇನಿ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಈ ವಾರ್ಡಿನಲ್ಲಿ ಜೆಡಿಎಸ್- ಕಾಂಗ್ರೆಸ್ ಪಕ್ಷದ ನಡುವೆ ತೀವ್ರ ಹಣಾಹಣಿಯಿತ್ತು. ಜೆಡಿಎಸ್ ಅಭ್ಯರ್ಥಿ ಆಯಿಷಾ ರುಬಿನಾ ಗೆಲುವು ಸಾಧಿಸಿದ ಹಿನ್ನೆಲೆ ಹತಾಶೆಗೊಂಡ ಕಾಂಗ್ರೆಸ್ ನ ಅಭ್ಯರ್ಥಿ ಸೈಯದ್ ನಾಜಿಯಾ ಹಾಜಿ ಹುಸೇನಿಯ ತಮ್ಮಂದಿರು ಈ ಮಹಿಳೆಗೆ ಚಾಕು ಚುಚ್ಚಿದ್ದಾರೆ. ಮನೆಗೆ ನುಗ್ಗಿ  ಅವಾಚ್ಯ ಶಬ್ದಗಳಿಂದ ಬೈದು ಗಂಡಸರಿಗಾಗಿ ಹುಡುಕಾಡಿದ್ದಾರೆ. ಯಾರೂ ಸಿಗದ ಹಿನ್ನೆಲೆ ಮಹಿಳೆಗೆ ಚಾಕುವಿನಿಂದ ಚುಚ್ಚಿದ್ದಾರೆ. ಹೀಗಾಗಿ ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ಇದ್ದು, ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments