Webdunia - Bharat's app for daily news and videos

Install App

ಓಟ್ ಹಾಕದಿರೋದಕ್ಕೆ ಚಾಕು ಇರಿದ ಭೂಪ!

Webdunia
ಸೋಮವಾರ, 3 ಸೆಪ್ಟಂಬರ್ 2018 (18:32 IST)
ಮತ ಹಾಕದ್ದಕ್ಕೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್ ಅಭ್ಯರ್ಥಿಯ ಸಂಬಂಧಿ ಮಹಿಳೆಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ.

ಮತ ಹಾಕದ್ದಕ್ಕೆ  ಚಾಕು ಹಾಕಿದ ಭೂಪ!. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲುಂಡಿರುವ ಕಾಂಗ್ರೆಸ್ ಅಭ್ಯರ್ಥಿಯ ಮೈದುನನೊಬ್ಬ ಮಹಿಳೆಯೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ.
ಕೊಪ್ಪಳದ  19ನೇ ವಾರ್ಡಿನಲ್ಲಿ ಘಟನೆ ನಡೆದಿದೆ.

ರೆಹಮತ್ ಬೀ (65) ಮಹಿಳೆಗೆ ಚಾಕುವಿನಿಂದ  ಸೈಯದ್ ನಿಜಾಮುದ್ದೀನ್ ಹಾಗೂ ಸೈಯದ್ ಸಿರಾಜುದ್ದೀನ್ ಹುಸೇನಿ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಈ ವಾರ್ಡಿನಲ್ಲಿ ಜೆಡಿಎಸ್- ಕಾಂಗ್ರೆಸ್ ಪಕ್ಷದ ನಡುವೆ ತೀವ್ರ ಹಣಾಹಣಿಯಿತ್ತು. ಜೆಡಿಎಸ್ ಅಭ್ಯರ್ಥಿ ಆಯಿಷಾ ರುಬಿನಾ ಗೆಲುವು ಸಾಧಿಸಿದ ಹಿನ್ನೆಲೆ ಹತಾಶೆಗೊಂಡ ಕಾಂಗ್ರೆಸ್ ನ ಅಭ್ಯರ್ಥಿ ಸೈಯದ್ ನಾಜಿಯಾ ಹಾಜಿ ಹುಸೇನಿಯ ತಮ್ಮಂದಿರು ಈ ಮಹಿಳೆಗೆ ಚಾಕು ಚುಚ್ಚಿದ್ದಾರೆ. ಮನೆಗೆ ನುಗ್ಗಿ  ಅವಾಚ್ಯ ಶಬ್ದಗಳಿಂದ ಬೈದು ಗಂಡಸರಿಗಾಗಿ ಹುಡುಕಾಡಿದ್ದಾರೆ. ಯಾರೂ ಸಿಗದ ಹಿನ್ನೆಲೆ ಮಹಿಳೆಗೆ ಚಾಕುವಿನಿಂದ ಚುಚ್ಚಿದ್ದಾರೆ. ಹೀಗಾಗಿ ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ಇದ್ದು, ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments