Webdunia - Bharat's app for daily news and videos

Install App

ಪೇದೆಗೆ ಚಾಕು ; ರೌಡಿಗೆ ಗುಂಡೇಟು

Webdunia
ಶುಕ್ರವಾರ, 10 ಮೇ 2019 (17:14 IST)
ಕುಖ್ಯಾತ ರೌಡಿಗೆ ಶೂಟೌಟ್ ನಡೆಸಿ ಬಂಧನ ಮಾಡಲಾಗಿದೆ.

ಕುಖ್ಯಾತ ರೌಡಿ ಗೌರೀಶ್ ಎಂಬಾತನನ್ನು ಬಂಧಿಸಲು ಹೋದ ಪೊಲೀಸ್ ಅಧಿಕಾರಿಗಳ ಮೇಲೆ ರೌಡಿಯೊಬ್ಬ  ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ  ಪೊಲೀಸರು ರೌಡಿಯ ಕಾಲಿಗೆ  ಶೂಟೌಟ್ ನಡೆಸಿ ಬಂಧಿಸಿದ ಘಟನೆ ನಡೆದಿದೆ.

ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ನಗರ ಪೋಲಿಸ್ ಆಯುಕ್ತ ಸಂದೀಪ್ ಪಾಟೀಲ್ ಭೇಟಿ ನೀಡಿದ್ದರು. ರೌಡಿಶೀಟರ್ ಗೌರೀಶ್ ವಿರುದ್ಧ ಮಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ರೌಡಿಶೀಟರ್ ನ್ನು ಬಂಧಿಸಲು ಬಲೆ ಬೀಸಿದ್ದರು.

ರೌಡಿಶೀಟರ್ ನನ್ನು ಬಂಧಿಸಲು ತೆರಳಿದ್ದ ಪೊಲೀಸ್ ತಂಡದಲ್ಲಿನ ಪೇದೆ ಶೀನಪ್ಪ ಎಂಬವರ ಮೇಲೆ ಆರೋಪಿ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಜಾಗೃತರಾದ ಎಸ್ ಐ ಕಬ್ಬಾಳ್ ರಾಜ್ ಅವರು ತಮ್ಮ ಪ್ರಾಣರಕ್ಷಣೆಗಾಗಿ ರೌಡಿಶೀಟರ್ ನ ಕಾಲಿಗೆ ಫೈರಿಂಗ್ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ರೌಡಿಶೀಟರ್ ವಿರುದ್ಧ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆರು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಮೂರು ಕೊಲೆ ಆರೋಪ ಪ್ರಕರಣಗಳಿವೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments