Webdunia - Bharat's app for daily news and videos

Install App

ಉಪನೋಂದಣಿ ಕಚೇರಿಯ ಈ ಹೊಸ ಬದಲಾವಣೆ ಬಗ್ಗೆ ತಿಳಿದುಕೊಳ್ಳಿ: ನೌಕರರಿಗೆ ಭಾರೀ ಲಾಭ

Krishnaveni K
ಮಂಗಳವಾರ, 24 ಸೆಪ್ಟಂಬರ್ 2024 (12:29 IST)
ಬೆಂಗಳೂರು: ರಾಜ್ಯದ ಉಪನೋಂದಣಿ ಕಚೇರಿ ವಿಚಾರದಲ್ಲಿ ಮಹತ್ವದ ಬದಲಾವಣೆಯೊಂದು ಆಗಿದ್ದು, ಇದರಿಂದ ನೌಕರ ವರ್ಗದವರಿಗೆ ದೊಡ್ಡ ಉಪಕಾರವಾದಂತಾಗಲಿದೆ. ಅದೇನು ಇಲ್ಲಿದೆ ವಿವರ.

ಇದುವರೆಗೆ ಸರ್ಕಾರೀ ಕಚೇರಿಯಾಗಿರುವ ಉಪನೋಂದಣಿ ಕಚೇರಿಗಳು ಪ್ರತೀ ಭಾನುವಾರ ಮತ್ತು ಎರಡನೇ, ನಾಲ್ಕನೇ ಶನಿವಾರಗಳಂದು ಇತರೆ ಸರ್ಕಾರೀ ಕಚೇರಿಯಂತೆ ರಜಾ ದಿನವಾಗಿರುತ್ತಿತ್ತು. ಆದರೆ ಇದರಿಂದ ಉದ್ಯೋಗಸ್ಥರಿಗೆ ತಮ್ಮ ಕೆಲಸ ಮಾಡಿಕೊಳ್ಳಲು ತೊಂದರೆಯಾಗುತ್ತಿತ್ತು.

ಹೀಗಾಗಿ ಈಗ ಉಪನೋಂದಣಿ ಕಚೇರಿಯನ್ನು ಶನಿವಾರ ಮತ್ತು ಭಾನುವಾರವೂ ತೆರೆದಿಡಲು ತೀರ್ಮಾನಿಸಲಾಗಿದೆ. ಭಾನುವಾರಗಳಂದೂ ರಾಜ್ಯದ ಎಲ್ಲಾ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ. ನೌಕರ ವರ್ಗದವರಿಂದ ಈ ಬಗ್ಗೆ ಬಹುದಿನಗಳಿಂದ ಬೇಡಿಕೆ ಕೇಳಿಬರುತ್ತಲೇ ಇತ್ತು.

ಉದ್ಯೋಗಸ್ಥರಿಗೆ ಉಪನೋಂದಣಿ ಕಚೇರಿಗೆ ತಮ್ಮ ಕೆಲಸ ಮಾಡಿಸಿಕೊಳ್ಳಲು ಒಂದು ದಿನ ಕಚೇರಿಗೆ ರಜೆ ಹಾಕುವ ಪರಿಸ್ಥಿತಿಯಿತ್ತು. ಆದರೆ ಈಗ ವಾರದ ಎಲ್ಲಾ ದಿನಗಳೂ ಕಚೇರಿ ತೆರೆದಿರಲಿದೆ. ಜೊತೆಗೆ ಭಾನುವಾರ ಅಥವಾ ಶನಿವಾರ ಕೆಲಸ ಮಾಡಿದ ಅಧಿಕಾರಿಗಳಿಗೆ ಮಂಗಳವಾರದಂದು ವಾರದ ರಜೆ ಸಿಗಲಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments