ಉಪನೋಂದಣಿ ಕಚೇರಿಯ ಈ ಹೊಸ ಬದಲಾವಣೆ ಬಗ್ಗೆ ತಿಳಿದುಕೊಳ್ಳಿ: ನೌಕರರಿಗೆ ಭಾರೀ ಲಾಭ

Krishnaveni K
ಮಂಗಳವಾರ, 24 ಸೆಪ್ಟಂಬರ್ 2024 (12:29 IST)
ಬೆಂಗಳೂರು: ರಾಜ್ಯದ ಉಪನೋಂದಣಿ ಕಚೇರಿ ವಿಚಾರದಲ್ಲಿ ಮಹತ್ವದ ಬದಲಾವಣೆಯೊಂದು ಆಗಿದ್ದು, ಇದರಿಂದ ನೌಕರ ವರ್ಗದವರಿಗೆ ದೊಡ್ಡ ಉಪಕಾರವಾದಂತಾಗಲಿದೆ. ಅದೇನು ಇಲ್ಲಿದೆ ವಿವರ.

ಇದುವರೆಗೆ ಸರ್ಕಾರೀ ಕಚೇರಿಯಾಗಿರುವ ಉಪನೋಂದಣಿ ಕಚೇರಿಗಳು ಪ್ರತೀ ಭಾನುವಾರ ಮತ್ತು ಎರಡನೇ, ನಾಲ್ಕನೇ ಶನಿವಾರಗಳಂದು ಇತರೆ ಸರ್ಕಾರೀ ಕಚೇರಿಯಂತೆ ರಜಾ ದಿನವಾಗಿರುತ್ತಿತ್ತು. ಆದರೆ ಇದರಿಂದ ಉದ್ಯೋಗಸ್ಥರಿಗೆ ತಮ್ಮ ಕೆಲಸ ಮಾಡಿಕೊಳ್ಳಲು ತೊಂದರೆಯಾಗುತ್ತಿತ್ತು.

ಹೀಗಾಗಿ ಈಗ ಉಪನೋಂದಣಿ ಕಚೇರಿಯನ್ನು ಶನಿವಾರ ಮತ್ತು ಭಾನುವಾರವೂ ತೆರೆದಿಡಲು ತೀರ್ಮಾನಿಸಲಾಗಿದೆ. ಭಾನುವಾರಗಳಂದೂ ರಾಜ್ಯದ ಎಲ್ಲಾ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ. ನೌಕರ ವರ್ಗದವರಿಂದ ಈ ಬಗ್ಗೆ ಬಹುದಿನಗಳಿಂದ ಬೇಡಿಕೆ ಕೇಳಿಬರುತ್ತಲೇ ಇತ್ತು.

ಉದ್ಯೋಗಸ್ಥರಿಗೆ ಉಪನೋಂದಣಿ ಕಚೇರಿಗೆ ತಮ್ಮ ಕೆಲಸ ಮಾಡಿಸಿಕೊಳ್ಳಲು ಒಂದು ದಿನ ಕಚೇರಿಗೆ ರಜೆ ಹಾಕುವ ಪರಿಸ್ಥಿತಿಯಿತ್ತು. ಆದರೆ ಈಗ ವಾರದ ಎಲ್ಲಾ ದಿನಗಳೂ ಕಚೇರಿ ತೆರೆದಿರಲಿದೆ. ಜೊತೆಗೆ ಭಾನುವಾರ ಅಥವಾ ಶನಿವಾರ ಕೆಲಸ ಮಾಡಿದ ಅಧಿಕಾರಿಗಳಿಗೆ ಮಂಗಳವಾರದಂದು ವಾರದ ರಜೆ ಸಿಗಲಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments