Webdunia - Bharat's app for daily news and videos

Install App

ಕೊಡಗು ಜಲ ಪ್ರಳಯ: ಸಚಿವ ಡಿಕೆಶಿ ಹೇಳಿದ್ದೇನು?

Webdunia
ಬುಧವಾರ, 22 ಆಗಸ್ಟ್ 2018 (15:16 IST)
ಕೊಡಗಿನಲ್ಲಿ ರಣಮಳೆಯಿಂದ ಕಂಗೆಟ್ಟ ನೆರೆ ಸಂತ್ರಸ್ತರಿಗೆ ಜಲಸಂಪನ್ಮೂಲ, ವೈದ್ಯಕೀಯ ಸಚಿವರ ಜಿಲ್ಲೆಯಿಂದ ನೆರವಿನ ಹಸ್ತ ಚಾಚಲಾಗಿದೆ.

ರಾಮನಗರ ಜಿಲ್ಲಾಡಳಿತದಿಂದ ಸಹಾಯ ಹಸ್ತ ಚಾಚಲಾಗಿದೆ. ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ, ವೈದ್ಯಕೀಯ ಸಚಿವ ಡಿ.ಕೆ.ಶಿವಕುಮಾರ್, ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯಿಂದ 5 ಕ್ಯಾಂಟರ್ ನಲ್ಲಿ ಅಗತ್ಯ ಆಹಾರ ಹಾಗೂ ಔಷಧಿ ಪದಾರ್ಥಗಳು ಕೊಡಗಿನ ಕಡೆಗೆ ಪಯಣ ಬೆಳೆಸಿದ ವಾಹನಗಳಿಗೆ ಹಸಿರು ಬಾವುಟ ತೋರಿಸಿ ಚಾಲನೆ ಕೊಟ್ಟರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತಿ ಇದ್ದರು. ಕೊಡಗಿನ ಮಳೆ ಅವಾಂತರದ ಬಗ್ಗೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ಅಲ್ಲಿನ ಸಂತ್ರಸ್ತರಿಗೆ ರಾಮನಗರ ಜಿಲ್ಲೆಯಿಂದಲೂ ಹಲವು ಖಾಸಗಿ ಕಂಪನಿಗಳು, ಕಾರ್ಖಾನೆಗಳು ಹಾಗೂ ಸಾರ್ವಜನಿಕರು ಸಹಾಯ ಮಾಡಿದ್ದಾರೆ. ಈಗಾಗಲೇ ನೆರೆಯಲ್ಲಿ ಸಿಲುಕಿರುವ ಜನರ ರಕ್ಷಣಾ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ. ಮುಖ್ಯವಾಗಿ ಅವರಿಗೆ ಶಾಶ್ವತವಾಗಿ ಪರಿಹಾರ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. ಹಾಗೇ ಯಾವ ಡ್ಯಾಂ ಗಳು ಬಿರುಕು ಬಿಟ್ಟಿಲ್ಲ, ಅದೆಲ್ಲವೂ ಕೇವಲ ಸುಳ್ಳುಸುದ್ದಿ ಅಷ್ಟೇ.

ಇನ್ನು ಈ ಬಗ್ಗೆ ವಂದತಿ ಹಬ್ಬಿಸಿದವರ ವಿರುದ್ಧ ಸೈಬರ್ ಕ್ರೈಮ್ ಗೂ ಕೂಡ ದೂರು ನೀಡಲಾಗಿದೆ. ಇದೇ ವಿಚಾರವಾಗಿ ಸಿಎಂ ಕೂಡ ರಿಪೋರ್ಟ್ ಕೇಳಿದ್ದಾರೆಂದು ಸಚಿವರು ತಿಳಿಸಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments