Webdunia - Bharat's app for daily news and videos

Install App

ಅಖಿಲ ಕೊಡವ ಸಮಾಜ ಹಾಗೂ ಜಿಲ್ಲೆಯ ವಿವಿಧ ಕೊಡವ ಸಮಾಜಗಳು ಜಿಲ್ಲಾಧಿಕಾರಿಗೆ ಮನವಿ

Webdunia
ಭಾನುವಾರ, 30 ಜನವರಿ 2022 (19:25 IST)
ಕೋವಿ ಹಕ್ಕಿನ ವಿಷಯವಾಗಿ ಕೊಡವ ಜನಾಂಗದ ಮಾತೃ ಸಂಸ್ಥೆಯಾಗಿರುವ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳಿಗೆ ಬೇಟಿ ಮನವಿ ಸಲ್ಲಿಸುವ ಮೂಲಕ ಸುಮಾರು ಒಂದು ಗಂಟೆಗಳ ಕಾಲ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಕೋವಿಯ ನಡುವಿನ ಬಾಂಧವ್ಯ ಮತ್ತು ಕೂರ್ಗ್ ಬೈ ರೇಸ್ ಎಂದರೆ ಯಾರು ಮತ್ತು ಹೇಗೆ ಎಂಬ ಬಗ್ಗೆ ಮನದಟ್ಟು ಪಟ್ಟಿ.
 ಅಖಿಲ ಕೊಡವ ಸಮಾಜ ಅಧ್ಯಕ್ಷ ಮಾತಂಡ ಮೊಣ್ಣಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಛೆರಿಗೆ ತೆರಳಿದ ಜಿಲ್ಲೆಯ ವಿವಿಧ ಕೊಡವ ಸಮಾಜಗಳ ಪ್ರತಿನಿಧಿಗಳನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ಜಿಲ್ಲಾಧಿಕಾರಿಗಳು  ಸಭೆ ಏರ್ಪಡಿಸಿದ್ದರು.
 ಮೊದಲಿಗೆ ಮಾತನಾಡಿದ  ಅಖಿಲ ಕೊಡವ ಸಮಾಜ ಅಧ್ಯಕ್ಷ ಮಾತಂಡ ಮೊಣ್ಣಪ್ಪ ನಾವು ಇಡೀ ಕೊಡವ ಜನಾಂಗದ ಪ್ರತಿನಿಧಿಯಾಗಿ ಬಂದಿರುವುದಾಗಿ ಮಾಹಿತಿ ನೀಡಿ ಜಿಲ್ಲಾಧಿಕಾರಿಗಳಿಗೆ ವಿವಿಧ ಕೊಡವ ಸಮಾಜ ಅಧ್ಯಕ್ಷರುನ್ನು ಪರಿಚಯಿಸಿದ್ದರು. ಬಳಿಕ ಮಾತನಾಡಿದ ಅವರು ಕೋವಿಯೊಂದಿಗಿರುವ ಕೊಡವರ ಸಂಬಂಧ ಹಾಗೂ ಕೂರ್ಗ್ ಬೈ ರೇಸ್ ಎಂದರೇನು ಮತ್ತು ಜಮ್ಮ ಹಿಡುವಳಿ ಎಂದರೇನು ಎಂಬ ಬಗ್ಗೆ ಮಾಹಿತಿ ನೀಡಿ, ಕೋವಿ ವಿಷಯದಲ್ಲಿ ಹಳೆಯ ದಾಖಲೆಗಳು ಹಾಗೂ ಸರಕಾರದ ಈ ಹಿಂದಿನ ಸುತ್ತೋಲೆ ಕುರಿತಾಗಿ ಸಂಪೂರ್ಣ ಮಾಹಿತಿ ನೀಡಿ ಜಿಲ್ಲಾಧಿಕಾರಿಗಳಿಗೆ ಮನದಟ್ಟು ಮಾಡಿಕೊಡಲಾಯಿತು. ಹಾಗೇ ಇದನೆಲ್ಲಾ ಪರಿಶೀಲಿಸದೆ ತಾವು ಏಕಾಏಕಿ ಸರಕಾರದ ಅಂಗಳಕ್ಕೆ ಚೆಂಡನ್ನು ಎಸೆದಿರುವುದು ಸರಿಯಲ್ಲ, ಕೂಡಲೇ ಇದನ್ನು ಪುನರ್'ಪರಿಶೀಲನೆ ಮಾಡಬೇಕಿದೆ ಎಂದು ಹೇಳಿದ್ದರು. ಈ ಸಮಯ ವಿವಿಧ ಕೊಡವ ಸಮಾಜ ಪ್ರತಿನಿಧಿಗಳು ಕೂಡ ದ್ವನಿಗೂಡಿಸಿ ವಿವರಿಸಿದ್ದರು ಜೊತೆಗೆ ಕೊಡಗಿನ ಒಂದಷ್ಟು ಜ್ವಲಂತ ಸಮಸ್ಯೆಗಳ ಬಗ್ಗೆ ಕೂಡ ಗಮನ ಸೆಳೆಯಲಾಯಿತು. 
ಬಳಿಕ ಸಭೆಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು ಸರಕಾರದ ಮುಖ್ಯ ಕಾರ್ಯದರ್ಶಿಗಳು ತಮಗೆ ಪತ್ರ ಬರೆದು ಕೇಳಿದ ಪ್ರಶ್ನೆಗೆ ಹಳೆಯ ದಾಖಲೆಗಳನ್ನು ಹಾಗೂ ಒಂದಷ್ಟು ಮಾಹಿತಿ ನೀಡಲಾಗಿದೆಯೇ ಹೊರತು ಎಲ್ಲಿಯೂ ಸಂಪೂರ್ಣ ವರದಿಯನ್ನು ಸಲ್ಲಿಸಲಾಗಿಲ್ಲ, ನಾನೂ ಜಿಲ್ಲೆಗೆ ಹೊಸದಾಗಿ ಬಂದಿರುವ ಕಾರಣ ಹಾಗೂ ನನಗೆ ಕೊಡಗಿನ ಹಲವಾರು ಸಮಸ್ಯೆಗಳ ಬಗ್ಗೆ ಹಾಗೂ ಕೋವಿ ವಿಷಯವಾಗಿ ಸಂಪೂರ್ಣ ಮಾಹಿತಿ ಇಲ್ಲದಿರುವ ಕಾರಣ ಮುಂದಿನ ದಿನಗಳಲ್ಲಿ ಹಲವಾರು ಸಭೆ ನಡೆಸಿ ಸಾಧಕ ಬಾಧಕಗಳನ್ನು ಚರ್ಚಿಸಿ ದಾಖಲೆಗಳನ್ನು ಪರಿಶೀಲಿಸಿ ಸಂಪೂರ್ಣ ವರದಿ ನೀಡಲಾಗುತ್ತದೆ ಹೊರತು ಏಕಾಏಕಿ ಯಾವ ನಿರ್ಧಾರವನ್ನು ಕೈಗೊಳ್ಳಲಾಗುವುದಿಲ್ಲ ಎಂದು ಸಭೆಗೆ ಮಾಹಿತಿ ನೀಡಿದ್ದರು.
 ಸುದೀರ್ಘ ಒಂದು ಗಂಟೆಗಳ ಕಾಲ ಚರ್ಚೆ ನಡೆಸಿ ಕೊನೆಗೆ ಅಖಿಲ ಕೊಡವ ಸಮಾಜ ವತಿಯಿಂದ ಮನವಿಯನ್ನು ನೀಡಲಾಯಿತು. 
ಈ ಸಂದರ್ಭದಲ್ಲಿ ಬಾಳುಗೋಡುವಿನ ಕೊಡವ ಸಮಾಜಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ ಸೇರಿದಂತೆ ಅಖಿಲ ಕೊಡವ ಸಮಾಜದ ಉಪಾಧ್ಯಕ್ಷ ಅಜ್ಜಿಕುಟ್ಟೀರ ಸುಬ್ರಮಣಿ ಮಾದಯ್ಯ, ಅಖಿಲ ಕೊಡವ ಸಮಾಜದ ಪ್ರಧಾನ ಕಾರ್ಯದರ್ಶಿ ಅಮ್ಮುಣಿಚಂಡ ರಾಜ ನಂಜಪ್ಪ, ಅಖಿಲ ಕೊಡವ ಸಮಾಜದ ಸದಸ್ಯ ತೇಲಪಂಡ ಪ್ರಮೋದ್ ಸೋಮಯ್ಯ, ಅಖಿಲ ಕೊಡವ ಚಮ್ಮಟೀರ ವಿಂಗ್ ಪೇಟೆ ವಿಂಗ್ವಿ ಅಧ್ಯಕ್ಷ ಅಧ್ಯಕ್ಷ ವಾಂಚೀರ ನಾಣಯ್ಯ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಅಪ್ಪಚೆಟ್ಟೋಳಂಡ ಪುಟ್ಟ ಮನು ಮುತ್ತಪ್ಪ, ಅಮ್ಮತಿ ಕೊಡವ ಸಮಾಜದ ಅಧ್ಯಕ್ಷ ಐನಂಡ ಪ್ರಕಾಶ್ ಗಣಪತಿ, ಕುಶಾಲನಗರ ಕೊಡವ ಸಮಾಜದ ಅಧ್ಯಕ್ಷ ಮಂಡೆಪಂಡ ಬೋಸ್ ಮೊಣ್ಣಪ್ಪ, ಬೆಂಗಳೂರು ಕೊಡವ ಸಮಾಜ ಯೂತ್ ಕೌನ್ಸಿಲ್ ಅಧ್ಯಕ್ಷ ಚೋಕಂಡ ಸೂರಜ್ ಸೋಮಯ್ಯ, ಮಡಿಕೇರಿ ಕೊಡವ ಸಮಾಜದ ಆಡಳಿತ ಮಂಡಳಿ ಸದಸ್ಯರಾದ ಡಾ. ದೇವಯ್ಯ, ತಲಕಾವೇರಿ ಮೂಲ ಸ್ವರೂಪ ರಕ್ಷಣಾ ವೇದಿಕೆ ಸಂಚಾಲಕ ಉಳ್ಳಿಯಡ ಎಂ ಪೂವಯ್ಯ, ಐನಂಡ ಕುಟ್ಟಪ್ಪ ಮೊದಲಾದವರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments