Webdunia - Bharat's app for daily news and videos

Install App

ಊಹಿಸಲಾಗದ ದುಃಖ, ಗಂಡಾಂತರ: ಕೋಡಿ ಶ್ರೀಗಳ ಶಾಕಿಂಗ್ ಭವಿಷ್ಯ

Krishnaveni K
ಶನಿವಾರ, 21 ಜೂನ್ 2025 (15:23 IST)
ಬೆಂಗಳೂರು: ಈ ವರ್ಷ ಯಾಕೋ ಒಂದಾದ ಮೇಲೊಂದರಂತೆ ದುರಂತ ಸಂಭವಿಸುತ್ತಿದೆ ಎಂದು ಎಲ್ಲರೂ ಅಂದುಕೊಳ್ಳುತ್ತಿರುವಾಗಲೇ ಕೋಡಿ ಶ್ರೀಗಳು ಮತ್ತೊಂದು ಶಾಕಿಂಗ್ ಭವಿಷ್ಯ ನುಡಿದಿದ್ದಾರೆ. ಊಹಿಸಲಾಗದ ದುಃಖ, ಗಂಡಾಂತರ ಕಾದಿದೆ ಎಂದಿದ್ದಾರೆ.

ಆಗಾಗ ದೇಶ, ರಾಜಕೀಯ, ಹವಾಮಾನದ ಕುರಿತು ಕರಾರುವಾಕ್ ಭವಿಷ್ಯ ನುಡಿಯುವ ಕೋಡಿ ಶ್ರೀಗಳು ಈ ಬಾರಿ ಹೇಳಿರುವ ಭವಿಷ್ಯ ನಿಜಕ್ಕೂ ಆತಂಕ ತರುವಂತಿದೆ. ಇದಕ್ಕೆ ಮೊದಲು ಕೋಡಿ ಶ್ರೀಗಳು ಹೇಳಿದ್ದ ಅನೇಕ ಭವಿಷ್ಯಗಳು ನಿಜವಾಗಿತ್ತು.

ಇದೀಗ ಜನವರಿ ಒಳಗಾಗಿ ದೇಶಕ್ಕೆ ಭಾರೀ ಗಂಡಾಂತರವಿದೆ ಎಂದಿದ್ದಾರೆ. ಯಾರೂ ಊಹಿಸಲಾಗದ ದುಃಖ ಕಾದಿದೆ. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಮುಂದೆ ಜಲಪ್ರಳಯ ಗಂಡಾಂತರವಿದೆ ಎಂದಿದ್ದಾರೆ.

ಈಗಾಗಲೇ ಮೇಘ ಸ್ಪೋಟ, ಜಲಪ್ರಳಯ, ವಾಯುವಿನಿಂದ ಆಪತ್ತು ಬರಬಹುದು ಎಂದಿದ್ದೆ. ವಿಮಾನ ಅಪಘಾತ ಕೆಲವು ದುರಂತಗಳು ಈಗಾಗಲೇ ಸಂಭವಿಸಿದೆ. ಮುಂದೆ ಮೇಘಸ್ಪೋಟವಾಗಬಹುದು. ಇದರಿಂದ ನಿರೀಕ್ಷೆಗೂ ಮೀರಿದ ದುಃಖವಾಗಲಿದೆ ಎಂದಿದ್ದಾರೆ. ಮನುಷ್ಯ ಓಡಾಡುತ್ತಲೇ ಸಾಯುತ್ತಾನೆ. ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿವೆ. ಜನ ಜೀವನ ಅಸ್ಥಿರಗೊಳ್ಳಲಿದೆ ಎಂದಿದ್ದಾರೆ. ಅವರ ಈ ಭವಿಷ್ಯವಾಣಿ ನಿಜಕ್ಕೂ ಆತಂಕ ಮೂಡಿಸುವಂತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments