Webdunia - Bharat's app for daily news and videos

Install App

ಯುಗಾದಿ ನಂತರ ಧಾರ್ಮಿಕ ಮುಖಂಡನ ಸಾವಾಗಲಿದೆ: ಕೋಡಿಶ್ರೀ ಭವಿಷ್ಯ

Krishnaveni K
ಮಂಗಳವಾರ, 20 ಫೆಬ್ರವರಿ 2024 (09:20 IST)
Photo Courtesy: Twitter
ಬೆಂಗಳೂರು: ಇದೀಗ ಬರಗಾಲಕ್ಕೀಡಾಗಿರುವ ಕರ್ನಾಟಕದಲ್ಲಿ ಯುಗಾದಿ ನಂತರ ಒಳ್ಳೆ ಮಳೆ, ಬೆಳೆಯಾಗಲಿದೆ. ಆದರೆ ಒಬ್ಬ ಧಾರ್ಮಿಕ ಮುಖಂಡನ ಸಾವಾಗಲಿದೆ ಎಂದು ಕೋಡಿ ಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಸದ್ಯಕ್ಕೆ ರಾಜ್ಯದಲ್ಲಿ ಮಳೆಯಿಲ್ಲದೇ ಬರಗಾಲದ ಸ್ಥಿತಿಯಿದೆ. ಬೆಂಗಳೂರು ಸೇರಿದಂತೆ ಇಡೀ ರಾಜ್ಯದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ. ಆದರೆ ಈ ವರ್ಷ ಯುಗಾದಿ ನಂತರ ಉತ್ತಮ ಮಳೆಯಾಗುವ ಸಾ‍ಧ‍್ಯತೆಯಿದೆ ಎಂದು ಕೋಡಿ ಶ್ರೀ ಭವಿಷ್ಯ ನುಡಿದಿದ್ದಾರೆ. ಇದು ರೈತರಿಗೆ ಸಮಾಧಾನಕರ ವಿಚಾರವಾಗಿದೆ.

ಆದರೆ ಯುಗಾದಿ ನಂತರ ಆಪತ್ತೂ ಇದೆ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ. ಧಾರ್ಮಿಕ ಮುಖಂಡರೊಬ್ಬರ ಸಾವಾಗುತ್ತದೆ. ಬಾಂಬ್ ಸ್ಪೋಟ, ಭೂಕಂಪವಾಗುವ ಸಾಧ‍್ಯತೆಯಿದೆ ಎಂದಿದ್ದಾರೆ. ಆದರೆ ರಾಜ್ಯ ರಾಜಕೀಯದ ಬಗ್ಗೆ ಯುಗಾದಿ ನಂತರವಷ್ಟೇ ಹೇಳುವುದಾಗಿ ತಿಳಿಸಿದ್ದಾರೆ.

ಯುಗಾದಿ ನಂತರವಷ್ಟೇ ರಾಜ್ಯ, ರಾಷ್ಟ್ರ ರಾಜಕಾರಣದ ಬಗ್ಗೆ ಹೇಳಬಹುದು. ಈಗಿನ ಪ್ರಕಾರ ಪ್ರಪಂಚದಾದ್ಯಂತ ಯುದ್ಧ, ಸ್ಪೋಟ, ಸಾವು ನೋವಿನ ಸಂಭವವಿದೆ ಎಂದು ಆತಂಕ ಹುಟ್ಟಿಸಿದ್ದಾರೆ. ಈ ಮೊದಲು ಹೊಸ ವರ್ಷದಂದು ಭವಿಷ್ಯ ನುಡಿದಿದ್ದ ಸ್ವಾಮೀಜಿ ಹೊಸ ವರ್ಷದಲ್ಲಿ ಮಳೆ, ನೀರಿಲ್ಲದೇ ಜನ ತೊಂದರೆ ಅನುಭವಿಸಲಿದ್ದಾರೆ ಎಂದಿದ್ದರು. ದೇವರನ್ನು ನಂಬುವುದೊಂದೇ ಪರಿಹಾರ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments