Webdunia - Bharat's app for daily news and videos

Install App

ಕೋಡಿಶ್ರೀ ಹೇಳಿದ್ದ ಬಾಂಬ್ ಭವಿಷ್ಯ ನಿಜವಾಯ್ತು: ಇನ್ನೊಂದೂ ನಿಜವಾದರೆ..!

Krishnaveni K
ಸೋಮವಾರ, 11 ಮಾರ್ಚ್ 2024 (09:52 IST)
ಬೆಂಗಳೂರು: ಈ ವರ್ಷ ಬಾಂಬ್ ಸ್ಪೋಟವಾಗುತ್ತದೆ ಎಂಬ ಕೋಡಿಶ್ರೀ ಭವಿಷ್ಯ ಇತ್ತೀಚೆಗೆ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣವಾದ ಬಳಿಕ ನಿಜವಾಗಿದೆ ಎಂದು ಅನಿಸಿತ್ತು. ಆದರೆ ಇದರ ಜೊತೆಗೆ ಕೋಡಿಶ್ರೀಗಳು ಇನ್ನೊಂದು ಭವಿಷ್ಯ ನುಡಿದಿದ್ದರು. ಅದು ನಿಜವಾಗುತ್ತಾ ನೋಡಬೇಕು.

ಇತ್ತೀಚೆಗೆ ಭವಿಷ್ಯ ನುಡಿದಿದ್ದ ಕೋಡಿಶ್ರೀಗಳು ಹಲವು ವಿಚಾರಗಳನ್ನು ಹೇಳಿದ್ದರು. ಅವರು ಹೇಳಿದ ಭವಿಷ್ಯ ಅನೇಕ ಬಾರಿ ನಿಜವಾಗಿದೆ. ಈ ಬಾರಿ ಜಾಗತಿಕವಾಗಿ ಮತಾಂಧತೆ ಹೆಚ್ಚಾಗಲಿದೆ. ಭೂಕಂಪ ಆಗುವ ಸಾಧ‍್ಯತೆಯಿದೆ. ಧಾರ್ಮಿಕ ಮುಖಂಡನ ಸಾವೂ ಆಗಲಿದೆ ಎಂದಿದ್ದರು.

ಅದರ ಜೊತೆಗೆ ಇನ್ನೊಂದು ವಿಚಾರವನ್ನೂ ಹೇಳಿದ್ದರು. ಯುಗಾದಿಗೆ ಮೊದಲು ಮಳೆಯಿಲ್ಲದೇ ಜನ ನೀರಿಗಾಗಿ ಹಾಹಾಕಾರ ನಡೆಸಬಹುದು. ಆದರೆ ಯುಗಾದಿ ನಂತರ ಮಳೆ ಸಾಧ‍್ಯತೆಯಿದೆ ಎಂದಿದ್ದರು. ಹೀಗಾಗಿ ಈ ಭವಿಷ್ಯ ನಿಜವಾಗುವುದೇ ಎಂದು ಜನರು ಎದಿರು ನೋಡುತ್ತಿದ್ದಾರೆ.

ಇತ್ತೀಚೆಗೆ ಬೆಂಗಳೂರ ಸೇರಿದಂತೆ ಇಡೀ ರಾಜ್ಯದಲ್ಲಿ ಸೂಕ್ತ ಮಳೆಯಿಲ್ಲದೇ ಜನ ನೀರಿಗಾಗಿ ಪರದಾಡುವಂತಾಗಿದೆ. ಹೀಗಾಗಿ ಯುಗಾದಿಗೆ ಇನ್ನು ಒಂದೇ ತಿಂಗಳು ಬಾಕಿಯಿದ್ದು, ಕೋಡಿಶ್ರೀಗಳು ಭವಿಷ್ಯ ನುಡಿದಂತೆ ಮಳೆಯಾದರೆ ಜನರು ನೀರಿಗಾಗಿ ಬವಣೆ ಪಡುವುದು ಕೊಂಚ ಮಟ್ಟಿಗೆ ತಗ್ಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಾಮಳೆಗೆ ಮುಂಬೈ ತತ್ತರ: ಜನಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖವಾಡ ಕಳಚಿಬಿತ್ತು: ಇಷ್ಟು ದಿನದ ಶೋಧಕ್ಕೆ ಬಿಗ್ ಟ್ವಿಸ್ಟ್

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯತೆ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

ಮುಂದಿನ ಸುದ್ದಿ
Show comments